<p><strong>ಅರಸು ಗುಂಪಿನ ವಿರುದ್ಧ ಮೊದಲ ಬಾರಿಗೆ ಭಿನ್ನಮತೀಯರ ಬಹಿರಂಗ ಸೆಣಸು</strong></p><p>ಬೆಂಗಳೂರು, ಮೇ 16– ವಿಧಾನಮಂಡಲದ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತೀಯರು ಮೊದಲ ಬಾರಿಗೆ ‘ಬಹಿರಂಗವಾಗಿ ಹೊರಬಂದು’ ಅರಸು ಬೆಂಬಲಿಗರ ಗುಂಪಿನೊಡನೆ ‘ಹೋರಾಡಲಿದ್ದಾರೆ’.</p><p>ಈ ‘ಹೋರಾಟದ’ ಅಂಗವಾಗಿ ನಾಳೆ ನಡೆಯಲಿರುವ ಪಕ್ಷದ ಅಧಿಕಾರ ವರ್ಗ ಹಾಗೂ ಕಾರ್ಯಸಮಿತಿ ಚುನಾವಣೆಗಳಲ್ಲಿ ಭಿನ್ನಮತೀಯರು ಮುಖ್ಯಮಂತ್ರಿ ಗುಂಪಿನ ವಿರುದ್ಧ ಸ್ಪರ್ಧಿಸಲಿದ್ದಾರೆ.</p><p>ಪಕ್ಷದ ಉಪನಾಯಕ ಸ್ಥಾನಕ್ಕೆ ಮಂತ್ರಿಮಂಡಲದ ಗುಂಪಿನ ಪರವಾಗಿ ಹಿರಿಯ ಸದಸ್ಯ, ಸಚಿವ ಶ್ರೀ ಎಚ್. ಸಿದ್ದವೀರಪ್ಪ ಅವರ ವಿರುದ್ಧ ಭಿನ್ನಮತೀಯರ ಪರವಾಗಿ ಮಾಜಿ ಸಚಿವ ಶ್ರೀ ಬಿ. ಬಸವಲಿಂಗಪ್ಪ ಅವರು ಸ್ಪರ್ಧಿಸಿದ್ದಾರೆ. ಈ ಸ್ಪರ್ಧೆ ಪೈಪೋಟಿಯ ಸೂಚಕವಾಗಿದೆ.</p>.<p><strong>ಫರಕ್ಕಾ ಕಾರ್ಯಾರಂಭಕ್ಕೆ ಮುನ್ನ ನದಿ ನೀರು ಹಂಚಿಕೆ ಒಪ್ಪಂದ</strong></p><p>ನವದೆಹಲಿ, ಮೇ 16– ಭಾರತ ಮತ್ತು ಬಾಂಗ್ಲಾ ದೇಶಗಳ ನಡುವೆ ಗಡಿ ಗುರುತಿಸುವ ಬಗ್ಗೆ ಎರಡೂ ದೇಶಗಳು ಇಂದು ಒಪ್ಪಂದ ಮಾಡಿಕೊಂಡವು.</p><p>1974ರ ಕೊನೆಯ ವೇಳೆಗೆ ಫರಕ್ಕಾ ಯೋಜನೆ ಕಾರ್ಯಾರಂಭವಾಗುವುದಕ್ಕೆ ಮೊದಲೇ ಗಂಗಾ ನದಿ ನೀರಿನ ಹಂಚಿಕೆ ಬಗ್ಗೆ ಸೌಹಾರ್ದಯುತ ಒಪ್ಪಂದಕ್ಕೆ ಬರಬೇಕೆಂದೂ ಎರಡೂ ದೇಶಗಳು ನಿರ್ಧರಿಸಿವೆ.</p><p>ಬಾಂಗ್ಲಾ ಪ್ರಧಾನಿ ಮುಜೀಬ್ ಅವರ ಐದು ದಿನಗಳ ಭಾರತ ಪ್ರವಾಸದ ಕೊನೆಯಲ್ಲಿ ಇಂದು ಹೊರಡಿಸಲಾದ ಸಂಯುಕ್ತ ಘೋಷಣೆಯಲ್ಲಿ ಪ್ರಧಾನಿ ಇಂದಿರಾಗಾಂಧಿ ಮತ್ತು ಪ್ರಧಾನಿ ಮುಜೀಬ್ ಈ ಅಂಶಗಳನ್ನು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸು ಗುಂಪಿನ ವಿರುದ್ಧ ಮೊದಲ ಬಾರಿಗೆ ಭಿನ್ನಮತೀಯರ ಬಹಿರಂಗ ಸೆಣಸು</strong></p><p>ಬೆಂಗಳೂರು, ಮೇ 16– ವಿಧಾನಮಂಡಲದ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತೀಯರು ಮೊದಲ ಬಾರಿಗೆ ‘ಬಹಿರಂಗವಾಗಿ ಹೊರಬಂದು’ ಅರಸು ಬೆಂಬಲಿಗರ ಗುಂಪಿನೊಡನೆ ‘ಹೋರಾಡಲಿದ್ದಾರೆ’.</p><p>ಈ ‘ಹೋರಾಟದ’ ಅಂಗವಾಗಿ ನಾಳೆ ನಡೆಯಲಿರುವ ಪಕ್ಷದ ಅಧಿಕಾರ ವರ್ಗ ಹಾಗೂ ಕಾರ್ಯಸಮಿತಿ ಚುನಾವಣೆಗಳಲ್ಲಿ ಭಿನ್ನಮತೀಯರು ಮುಖ್ಯಮಂತ್ರಿ ಗುಂಪಿನ ವಿರುದ್ಧ ಸ್ಪರ್ಧಿಸಲಿದ್ದಾರೆ.</p><p>ಪಕ್ಷದ ಉಪನಾಯಕ ಸ್ಥಾನಕ್ಕೆ ಮಂತ್ರಿಮಂಡಲದ ಗುಂಪಿನ ಪರವಾಗಿ ಹಿರಿಯ ಸದಸ್ಯ, ಸಚಿವ ಶ್ರೀ ಎಚ್. ಸಿದ್ದವೀರಪ್ಪ ಅವರ ವಿರುದ್ಧ ಭಿನ್ನಮತೀಯರ ಪರವಾಗಿ ಮಾಜಿ ಸಚಿವ ಶ್ರೀ ಬಿ. ಬಸವಲಿಂಗಪ್ಪ ಅವರು ಸ್ಪರ್ಧಿಸಿದ್ದಾರೆ. ಈ ಸ್ಪರ್ಧೆ ಪೈಪೋಟಿಯ ಸೂಚಕವಾಗಿದೆ.</p>.<p><strong>ಫರಕ್ಕಾ ಕಾರ್ಯಾರಂಭಕ್ಕೆ ಮುನ್ನ ನದಿ ನೀರು ಹಂಚಿಕೆ ಒಪ್ಪಂದ</strong></p><p>ನವದೆಹಲಿ, ಮೇ 16– ಭಾರತ ಮತ್ತು ಬಾಂಗ್ಲಾ ದೇಶಗಳ ನಡುವೆ ಗಡಿ ಗುರುತಿಸುವ ಬಗ್ಗೆ ಎರಡೂ ದೇಶಗಳು ಇಂದು ಒಪ್ಪಂದ ಮಾಡಿಕೊಂಡವು.</p><p>1974ರ ಕೊನೆಯ ವೇಳೆಗೆ ಫರಕ್ಕಾ ಯೋಜನೆ ಕಾರ್ಯಾರಂಭವಾಗುವುದಕ್ಕೆ ಮೊದಲೇ ಗಂಗಾ ನದಿ ನೀರಿನ ಹಂಚಿಕೆ ಬಗ್ಗೆ ಸೌಹಾರ್ದಯುತ ಒಪ್ಪಂದಕ್ಕೆ ಬರಬೇಕೆಂದೂ ಎರಡೂ ದೇಶಗಳು ನಿರ್ಧರಿಸಿವೆ.</p><p>ಬಾಂಗ್ಲಾ ಪ್ರಧಾನಿ ಮುಜೀಬ್ ಅವರ ಐದು ದಿನಗಳ ಭಾರತ ಪ್ರವಾಸದ ಕೊನೆಯಲ್ಲಿ ಇಂದು ಹೊರಡಿಸಲಾದ ಸಂಯುಕ್ತ ಘೋಷಣೆಯಲ್ಲಿ ಪ್ರಧಾನಿ ಇಂದಿರಾಗಾಂಧಿ ಮತ್ತು ಪ್ರಧಾನಿ ಮುಜೀಬ್ ಈ ಅಂಶಗಳನ್ನು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>