ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ ಮಂಗಳವಾರ 20.4.1971

50 ವರ್ಷಗಳ ಹಿಂದೆ ಮಂಗಳವಾರ 20.4.1971
Last Updated 19 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು ಬಿಟ್ಟು ಬೇರೆಡೆ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಸೂಚನೆ

ಬೆಂಗಳೂರು, ಏ. 19– ಬೆಂಗಳೂರಿನಲ್ಲಿಯೇ ಕೈಗಾರಿಕೆಗಳನ್ನು ಕೇಂದ್ರೀಕರಿಸುವುದನ್ನು ರಾಜ್ಯಪಾಲ ಶ್ರೀ ಧರ್ಮವೀರರವರು ವಿರೋಧಿಸುತ್ತಾರೆ.

‘ಕಲಕತ್ತೆಯ ಪರಿಸ್ಥಿತಿ ಬೆಂಗಳೂರಿನಲ್ಲಿಯೂ ಆಗುವುದು ನನಗಿಷ್ಟವಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ, ರಾಜ್ಯದ ಬೇರೆ ಬೇರೆ ಪಟ್ಟಣಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವಂತೆ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಇಡೀ ಸಿಲ್ಹೆಟ್ ಜಿಲ್ಲೆ ಮುಕ್ತಿಫೌಜ್ ವಶ

ಶಿಲ್ಲಾಂಗ್, ಏ. 19– ಸಿಲ್ಹೆಟ್ ಪಟ್ಟಣದಿಂದ ಸುಮಾರು ಹತ್ತು ಕಿಲೊ ಮೀಟರ್ ದೂರದಲ್ಲಿರುವ ಆಯಕಟ್ಟಿನ ಷಾಲೂಟಕಾರ್ ವಿಮಾನ ನಿಲ್ದಾಣವನ್ನು ಇಂದು ಮಧ್ಯಾಹ್ನ ಬಾಂಗ್ಲಾದೇಶದ ವಿಮೋಚನಾ ಸೇನೆಯು ವಶಪಡಿಸಿಕೊಂಡಿತು.

ವಿಮಾನ ನಿಲ್ದಾಣ ವಶವಾದ್ದರಿಂದ ಇಡೀ ಸಿಲ್ಹೆಟ್ ಜಿಲ್ಲೆಯಿಂದ ಪಾಕಿಸ್ತಾನಿ ಸೈನಿಕರನ್ನು ಹೊಡೆದಟ್ಟಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT