ಸಾಧಾರಣವಾಗಿ ತತ್ಕ್ಷಣದ ಸಮಸ್ಯೆಗಳಷ್ಟೇ ರಾಜಕಾರಣಿಯ ಚಿಂತೆಯಾಗಿರುತ್ತದೆ. ಆದರೆ, ಲೇಖಕ ಅಥವಾ ಕರ್ತೃವಿನ ಚಿಂತನೆ ಇನ್ನೂ ಆಳವಾದದ್ದು, ವ್ಯಾಪಕ, ಮೂಲಭೂತ ರೀತಿಯದು; ಮಾನವನ ಸುಖ–ದುಃಖ, ಶಂಕೆ–ಚಿಂತೆಗಳ ಸುಳಿಯಲ್ಲಿ ಸತತ ಅನ್ವೇಷಣೆ ಅವರದು. ಸಾಮಾಜಿಕ ಜೀವನಕ್ಕೆ ಒಂದು ಅರ್ಥ ಹುಡುಕುವ ಭಾವುಕರು ಅವರು ಎನ್ನುತ್ತಾರೆ ಇಂದಿರಾ.