<h2>ಹರಿಯಾಣ ಡಿಐಜಿ ಕೊಲೆಗೆ ಹಿಂದಿ ಚಿತ್ರದ ಪ್ರೇರಣೆ</h2>.<p><strong>ಚಂಡೀಗಢ, ಜೂನ್ 9</strong>– ಅಪರಾಧಾತ್ಮಕ ಚಿತ್ರಗಳು ಕೊಲೆ ನಡೆಸಲು ಅಪ್ರಬುದ್ಧ ಮನಸ್ಸುಗಳನ್ನು ಪ್ರೇರೇಪಿಸಬಹುದೇ? </p><p>ಜೂನ್ ನಾಲ್ಕರಂದು ತಮ್ಮ ನಿವಾಸದಲ್ಲಿ ಮರಣಕ್ಕೀಡಾದ ಹರಿಯಾಣ ಜೈಲುಗಳ ಡಿ.ಐ.ಜಿ. ಈಶ್ವರಸಿಂಗ್ ಕದನ್ ಅವರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಶ್ನೆಯನ್ನು ವಿಶ್ಲೇಷಿಸಿದರೆ ಇದು ಸತ್ಯವೇನೋ ಅನ್ನಿಸದಿರದು. </p><p>ಅವರ ಮನೆ ಸೇವಕ, ಹತ್ತೊಂಬತ್ತು ವರ್ಷದ ಲೀಲಾರಾಮ್ ಕುಚ್ನನ್ನು ಪ್ರಶ್ನಿಸಿದಾಗ ಹೊರಬಂದ ಸಂಗತಿಗಳಲ್ಲಿ ಈ ಅಂಶ ಸಾಬೀತಾಗಿದೆ. ಅಪರಾಧವನ್ನು ತೋರುವ ಹಿಂದಿ ಚಿತ್ರವೊಂದರಿಂದತನಗೆ ಈ ಕೊಲೆಗೆ ಪ್ರೇರಣೆ ದೊರೆಯಿತೆಂದು ಆತ ಒಪ್ಪಿಕೊಂಡಿದ್ದಾನೆ. </p>. <h2>ಪರ್ವತಾರೋಹಿಗಳ ಕಣ್ಮರೆ:ತನಿಖಾ ಆಯೋಗ ನೇಮಕ</h2>. <p>ನವದೆಹಲಿ, ಜೂನ್ 9– ಭಾರತ– ನ್ಯೂಜಿಲೆಂಡ್ ಮಹಿಳಾ ಪರ್ವತಾರೋಹಿಗಳ ತಂಡಕ್ಕೆ ಸೇರಿದ 4 ಮಂದಿ ಕಣ್ಮರೆಯಾಗಿರುವುದಕ್ಕೆ ಕಾರಣವಾದಂಥ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ಆಯೋಗವೊಂದನ್ನು ನೇಮಿಸಿರುವುದಾಗಿ ಭಾರತೀಯ ಪರ್ವತಾರೋಹಿ ಪ್ರತಿಷ್ಠಾನ ಇಂದು ಪ್ರಕಟಿಸಿದೆ. </p><p>ಈ ಪ್ರತಿಷ್ಠಾನದ ಮಾಜಿ ಅಧ್ಯಕ್ಷರೂ ಕೇಂದ್ರ ಸಚಿವ ಸಂಪುಟದ ಮಾಜಿ ಕಾರ್ಯದರ್ಶಿಯೂ ಆದ ಎಸ್.ಎಸ್. ಖೇರಾ ಅವರು ತನಿಖಾ ಆಯೋಗದ ಅಧ್ಯಕ್ಷರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಹರಿಯಾಣ ಡಿಐಜಿ ಕೊಲೆಗೆ ಹಿಂದಿ ಚಿತ್ರದ ಪ್ರೇರಣೆ</h2>.<p><strong>ಚಂಡೀಗಢ, ಜೂನ್ 9</strong>– ಅಪರಾಧಾತ್ಮಕ ಚಿತ್ರಗಳು ಕೊಲೆ ನಡೆಸಲು ಅಪ್ರಬುದ್ಧ ಮನಸ್ಸುಗಳನ್ನು ಪ್ರೇರೇಪಿಸಬಹುದೇ? </p><p>ಜೂನ್ ನಾಲ್ಕರಂದು ತಮ್ಮ ನಿವಾಸದಲ್ಲಿ ಮರಣಕ್ಕೀಡಾದ ಹರಿಯಾಣ ಜೈಲುಗಳ ಡಿ.ಐ.ಜಿ. ಈಶ್ವರಸಿಂಗ್ ಕದನ್ ಅವರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಶ್ನೆಯನ್ನು ವಿಶ್ಲೇಷಿಸಿದರೆ ಇದು ಸತ್ಯವೇನೋ ಅನ್ನಿಸದಿರದು. </p><p>ಅವರ ಮನೆ ಸೇವಕ, ಹತ್ತೊಂಬತ್ತು ವರ್ಷದ ಲೀಲಾರಾಮ್ ಕುಚ್ನನ್ನು ಪ್ರಶ್ನಿಸಿದಾಗ ಹೊರಬಂದ ಸಂಗತಿಗಳಲ್ಲಿ ಈ ಅಂಶ ಸಾಬೀತಾಗಿದೆ. ಅಪರಾಧವನ್ನು ತೋರುವ ಹಿಂದಿ ಚಿತ್ರವೊಂದರಿಂದತನಗೆ ಈ ಕೊಲೆಗೆ ಪ್ರೇರಣೆ ದೊರೆಯಿತೆಂದು ಆತ ಒಪ್ಪಿಕೊಂಡಿದ್ದಾನೆ. </p>. <h2>ಪರ್ವತಾರೋಹಿಗಳ ಕಣ್ಮರೆ:ತನಿಖಾ ಆಯೋಗ ನೇಮಕ</h2>. <p>ನವದೆಹಲಿ, ಜೂನ್ 9– ಭಾರತ– ನ್ಯೂಜಿಲೆಂಡ್ ಮಹಿಳಾ ಪರ್ವತಾರೋಹಿಗಳ ತಂಡಕ್ಕೆ ಸೇರಿದ 4 ಮಂದಿ ಕಣ್ಮರೆಯಾಗಿರುವುದಕ್ಕೆ ಕಾರಣವಾದಂಥ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ಆಯೋಗವೊಂದನ್ನು ನೇಮಿಸಿರುವುದಾಗಿ ಭಾರತೀಯ ಪರ್ವತಾರೋಹಿ ಪ್ರತಿಷ್ಠಾನ ಇಂದು ಪ್ರಕಟಿಸಿದೆ. </p><p>ಈ ಪ್ರತಿಷ್ಠಾನದ ಮಾಜಿ ಅಧ್ಯಕ್ಷರೂ ಕೇಂದ್ರ ಸಚಿವ ಸಂಪುಟದ ಮಾಜಿ ಕಾರ್ಯದರ್ಶಿಯೂ ಆದ ಎಸ್.ಎಸ್. ಖೇರಾ ಅವರು ತನಿಖಾ ಆಯೋಗದ ಅಧ್ಯಕ್ಷರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>