ಬೆಂಗಳೂರು, ಏ. 4– ಕೃಷ್ಣ ಮೇಲ್ದಂಡೆ, ಹೇಮಾವತಿ ಮತ್ತು ಇತರ ನಾಲ್ಕು ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಣ ದುರುಪಯೋಗದ ಬಗ್ಗೆ ಬಂದಿರುವ ದೂರುಗಳನ್ನು ಗಮನಿಸಿ ತನಿಖೆ ಮಾಡಲು ಜಾಗ್ರತಾ ಆಯೋಗಕ್ಕೆ ವಹಿಸಲಾಗಿದ್ದು, ಅದರ ವರದಿಗಳನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸು ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.