<p><strong>ವಿಧಾನಸಭೆ ವಿಸರ್ಜನೆ ಆಗಿದ್ದರೂ ರಾಷ್ಟ್ರಪತಿ ಚುನಾವಣೆಗೆ ಅಡ್ಡಿ ಇಲ್ಲ</strong></p><p><strong>ದೆಹಲಿ, ಜೂನ್ 5</strong>: ಒಂದು ರಾಜ್ಯದ ವಿಧಾನಸಭೆ ವಿಸರ್ಜನೆ ಆಗಿದ್ದರೂ ರಾಷ್ಟ್ರಪತಿ ಚುನಾವಣೆಯನ್ನು ಅವರ ಅಧಿಕಾರಾವಧಿ ಮುಗಿಯುವ ಮುನ್ನವೇ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.</p><p>ರಾಷ್ಟ್ರಪತಿಯವರ ಅಧಿಕಾರಾವಧಿ ಮುಗಿದ ಕಾರಣ ತೆರವಾದ ಅವರ ಸ್ಥಾನಕ್ಕೆ ಚುನಾವಣೆ ನಡೆಯುವ ಸಮಯಕ್ಕೆ ಅಸ್ತಿತ್ವದಲ್ಲಿರುವ ಸಂಸತ್ತಿನ ಉಭಯ ಸದನಗಳ ಹಾಗೂ ರಾಜ್ಯ ವಿಧಾನಸಭೆಗಳ ಚುನಾಯಿತ ಸದಸ್ಯರು ಮಾತ್ರ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಪಡೆದಿರುತ್ತಾರೆ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. </p> <p><strong>ಜೆ.ಪಿ. ನೇತೃತ್ವದಲ್ಲಿ ಬೃಹತ್ ಜಾಥಾ</strong></p><p><strong>ಪಟನಾ, ಜೂನ್ 5:</strong> ಸರ್ವೋದಯ ನಾಯಕ ಜಯಪ್ರಕಾಶ ನಾರಾಯಣ್ ಅವರ ನಾಯಕತ್ವದಲ್ಲಿ ಅಸಂಖ್ಯಾತ ಮಂದಿ ಇಂದು ರಾಜಧಾನಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಿಹಾರ ವಿಧಾನಸಭೆ ವಿಸರ್ಜನೆಗಾಗಿ ಒತ್ತಾಯಪಡಿಸಿದರು.</p><p>ಬಿಹಾರ ವಿದ್ಯಾರ್ಥಿ ಕ್ರಿಯಾ ಸಮಿತಿ ಏರ್ಪಡಿಸಿದ್ದ ಈ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಮಂದಿ ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದರು.</p><p>ಟ್ರಕ್ಕುಗಳಲ್ಲಿ ಮೆರವಣಿಗೆ ನಡೆಸಿದ ಜನ, ವಿಧಾನಸಭೆ ವಿಸರ್ಜನೆಗೆ ಒತ್ತಾಯಪಡಿಸಲು ವಿವಿಧ ಕ್ಷೇತ್ರಗಳ ಮತದಾರರಿಂದ ಸಂಗ್ರಹಿಸಿದ್ದ ಹಸ್ತಾಕ್ಷರ ಪತ್ರಗಳ ಕಂತೆಗಳನ್ನು ಹೊತ್ತು<br>ಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಧಾನಸಭೆ ವಿಸರ್ಜನೆ ಆಗಿದ್ದರೂ ರಾಷ್ಟ್ರಪತಿ ಚುನಾವಣೆಗೆ ಅಡ್ಡಿ ಇಲ್ಲ</strong></p><p><strong>ದೆಹಲಿ, ಜೂನ್ 5</strong>: ಒಂದು ರಾಜ್ಯದ ವಿಧಾನಸಭೆ ವಿಸರ್ಜನೆ ಆಗಿದ್ದರೂ ರಾಷ್ಟ್ರಪತಿ ಚುನಾವಣೆಯನ್ನು ಅವರ ಅಧಿಕಾರಾವಧಿ ಮುಗಿಯುವ ಮುನ್ನವೇ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.</p><p>ರಾಷ್ಟ್ರಪತಿಯವರ ಅಧಿಕಾರಾವಧಿ ಮುಗಿದ ಕಾರಣ ತೆರವಾದ ಅವರ ಸ್ಥಾನಕ್ಕೆ ಚುನಾವಣೆ ನಡೆಯುವ ಸಮಯಕ್ಕೆ ಅಸ್ತಿತ್ವದಲ್ಲಿರುವ ಸಂಸತ್ತಿನ ಉಭಯ ಸದನಗಳ ಹಾಗೂ ರಾಜ್ಯ ವಿಧಾನಸಭೆಗಳ ಚುನಾಯಿತ ಸದಸ್ಯರು ಮಾತ್ರ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಪಡೆದಿರುತ್ತಾರೆ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. </p> <p><strong>ಜೆ.ಪಿ. ನೇತೃತ್ವದಲ್ಲಿ ಬೃಹತ್ ಜಾಥಾ</strong></p><p><strong>ಪಟನಾ, ಜೂನ್ 5:</strong> ಸರ್ವೋದಯ ನಾಯಕ ಜಯಪ್ರಕಾಶ ನಾರಾಯಣ್ ಅವರ ನಾಯಕತ್ವದಲ್ಲಿ ಅಸಂಖ್ಯಾತ ಮಂದಿ ಇಂದು ರಾಜಧಾನಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಿಹಾರ ವಿಧಾನಸಭೆ ವಿಸರ್ಜನೆಗಾಗಿ ಒತ್ತಾಯಪಡಿಸಿದರು.</p><p>ಬಿಹಾರ ವಿದ್ಯಾರ್ಥಿ ಕ್ರಿಯಾ ಸಮಿತಿ ಏರ್ಪಡಿಸಿದ್ದ ಈ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಮಂದಿ ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದರು.</p><p>ಟ್ರಕ್ಕುಗಳಲ್ಲಿ ಮೆರವಣಿಗೆ ನಡೆಸಿದ ಜನ, ವಿಧಾನಸಭೆ ವಿಸರ್ಜನೆಗೆ ಒತ್ತಾಯಪಡಿಸಲು ವಿವಿಧ ಕ್ಷೇತ್ರಗಳ ಮತದಾರರಿಂದ ಸಂಗ್ರಹಿಸಿದ್ದ ಹಸ್ತಾಕ್ಷರ ಪತ್ರಗಳ ಕಂತೆಗಳನ್ನು ಹೊತ್ತು<br>ಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>