ಹೆಗ್ಗಡದೇವನಕೋಟೆ ತಾಲ್ಲೂಕಿನ ತಾರಕ ಜಲಾಶಯದ ಶಂಕುಸ್ಥಾಪನೆ ಮಾಡಿದ ಶ್ರೀ ಪಾಟೀಲರು ತಾರಕ ಯೋಜನೆ ಬಿಟ್ಟು ಮತ್ತೆ ಯಾವುದಕ್ಕೂ ತಾಂತ್ರಿಕ ಮಂಜೂರಾತಿ ಸಿಕ್ಕಿಲ್ಲ. ಆದರೂ, ಕಪಿಲಾ, ಹೇಮಾವತಿ, ಹಾರಂಗಿ ಜಲಾಶಯಗಳ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ಹೇಳಿ, ಏನೇ ಆದರೂ ಈ ಜಲಾಶಯಗಳ ಕೆಲಸವನ್ನು ನಿಲ್ಲಿಸುವುದಿಲ್ಲ. ಈಗ ನಡೆಯುತ್ತಿರುವ ರೀತಿಯಲ್ಲೇ ಕೆಲಸ ಮುಂದುವರಿಸಿ ಒಂದೆರಡು ವರ್ಷಗಳಲ್ಲೇ ಜಲಾಶಯ ನಿರ್ಮಾಣವನ್ನು ಪೂರೈಸಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.