<p><strong>ಕಾವೇರಿ ಯೋಜನೆಗಳ ಕಾರ್ಯಗತಕ್ಕೆ ಮುಖ್ಯಮಂತ್ರಿ ಸಂಕಲ್ಪ</strong></p>.<p><strong>ಮೈಸೂರು, ಜ.16– </strong>ಕೇಂದ್ರ ಸರ್ಕಾರದಿಂದ ತಾಂತ್ರಿಕ ಮಂಜೂರಾತಿ ಬರಲಿ ಬಿಡಲಿ ಕಾವೇರಿ ನದಿ ಪಾತ್ರದಲ್ಲಿ ಈಗ ಕೈಗೊಳ್ಳಲಾಗಿರುವ ನೀರಾವರಿ ಜಲಾಶಯಗಳನ್ನು ಭರದಿಂದ ಮುಂದುವರಿಸಿ ಪೂರೈಸುವ ತಮ್ಮ ಸಂಕಲ್ಪವನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಸ್ಪಷ್ಟಪಡಿಸಿದರು.</p>.<p>ಹೆಗ್ಗಡದೇವನಕೋಟೆ ತಾಲ್ಲೂಕಿನ ತಾರಕ ಜಲಾಶಯದ ಶಂಕುಸ್ಥಾಪನೆ ಮಾಡಿದ ಶ್ರೀ ಪಾಟೀಲರು ತಾರಕ ಯೋಜನೆ ಬಿಟ್ಟು ಮತ್ತೆ ಯಾವುದಕ್ಕೂ ತಾಂತ್ರಿಕ ಮಂಜೂರಾತಿ ಸಿಕ್ಕಿಲ್ಲ. ಆದರೂ, ಕಪಿಲಾ, ಹೇಮಾವತಿ, ಹಾರಂಗಿ ಜಲಾಶಯಗಳ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ಹೇಳಿ, ಏನೇ ಆದರೂ ಈ ಜಲಾಶಯಗಳ ಕೆಲಸವನ್ನು ನಿಲ್ಲಿಸುವುದಿಲ್ಲ. ಈಗ ನಡೆಯುತ್ತಿರುವ ರೀತಿಯಲ್ಲೇ ಕೆಲಸ ಮುಂದುವರಿಸಿ ಒಂದೆರಡು ವರ್ಷಗಳಲ್ಲೇ ಜಲಾಶಯ ನಿರ್ಮಾಣವನ್ನು ಪೂರೈಸಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾವೇರಿ ಯೋಜನೆಗಳ ಕಾರ್ಯಗತಕ್ಕೆ ಮುಖ್ಯಮಂತ್ರಿ ಸಂಕಲ್ಪ</strong></p>.<p><strong>ಮೈಸೂರು, ಜ.16– </strong>ಕೇಂದ್ರ ಸರ್ಕಾರದಿಂದ ತಾಂತ್ರಿಕ ಮಂಜೂರಾತಿ ಬರಲಿ ಬಿಡಲಿ ಕಾವೇರಿ ನದಿ ಪಾತ್ರದಲ್ಲಿ ಈಗ ಕೈಗೊಳ್ಳಲಾಗಿರುವ ನೀರಾವರಿ ಜಲಾಶಯಗಳನ್ನು ಭರದಿಂದ ಮುಂದುವರಿಸಿ ಪೂರೈಸುವ ತಮ್ಮ ಸಂಕಲ್ಪವನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಸ್ಪಷ್ಟಪಡಿಸಿದರು.</p>.<p>ಹೆಗ್ಗಡದೇವನಕೋಟೆ ತಾಲ್ಲೂಕಿನ ತಾರಕ ಜಲಾಶಯದ ಶಂಕುಸ್ಥಾಪನೆ ಮಾಡಿದ ಶ್ರೀ ಪಾಟೀಲರು ತಾರಕ ಯೋಜನೆ ಬಿಟ್ಟು ಮತ್ತೆ ಯಾವುದಕ್ಕೂ ತಾಂತ್ರಿಕ ಮಂಜೂರಾತಿ ಸಿಕ್ಕಿಲ್ಲ. ಆದರೂ, ಕಪಿಲಾ, ಹೇಮಾವತಿ, ಹಾರಂಗಿ ಜಲಾಶಯಗಳ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ಹೇಳಿ, ಏನೇ ಆದರೂ ಈ ಜಲಾಶಯಗಳ ಕೆಲಸವನ್ನು ನಿಲ್ಲಿಸುವುದಿಲ್ಲ. ಈಗ ನಡೆಯುತ್ತಿರುವ ರೀತಿಯಲ್ಲೇ ಕೆಲಸ ಮುಂದುವರಿಸಿ ಒಂದೆರಡು ವರ್ಷಗಳಲ್ಲೇ ಜಲಾಶಯ ನಿರ್ಮಾಣವನ್ನು ಪೂರೈಸಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>