ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 50 ವರ್ಷಗಳ ಹಿಂದೆ: ಭಾನುವಾರ 17–1–1971

Last Updated 16 ಜನವರಿ 2021, 19:31 IST
ಅಕ್ಷರ ಗಾತ್ರ

ಕಾವೇರಿ ಯೋಜನೆಗಳ ಕಾರ್ಯಗತಕ್ಕೆ ಮುಖ್ಯಮಂತ್ರಿ ಸಂಕಲ್ಪ

ಮೈಸೂರು, ಜ.16– ಕೇಂದ್ರ ಸರ್ಕಾರದಿಂದ ತಾಂತ್ರಿಕ ಮಂಜೂರಾತಿ ಬರಲಿ ಬಿಡಲಿ ಕಾವೇರಿ ನದಿ ಪಾತ್ರದಲ್ಲಿ ಈಗ ಕೈಗೊಳ್ಳಲಾಗಿರುವ ನೀರಾವರಿ ಜಲಾಶಯಗಳನ್ನು ಭರದಿಂದ ಮುಂದುವರಿಸಿ ಪೂರೈಸುವ ತಮ್ಮ ಸಂಕಲ್ಪವನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಸ್ಪಷ್ಟಪಡಿಸಿದರು.

ಹೆಗ್ಗಡದೇವನಕೋಟೆ ತಾಲ್ಲೂಕಿನ ತಾರಕ ಜಲಾಶಯದ ಶಂಕುಸ್ಥಾಪನೆ ಮಾಡಿದ ಶ್ರೀ ಪಾಟೀಲರು ತಾರಕ ಯೋಜನೆ ಬಿಟ್ಟು ಮತ್ತೆ ಯಾವುದಕ್ಕೂ ತಾಂತ್ರಿಕ ಮಂಜೂರಾತಿ ಸಿಕ್ಕಿಲ್ಲ. ಆದರೂ, ಕಪಿಲಾ, ಹೇಮಾವತಿ, ಹಾರಂಗಿ ಜಲಾಶಯಗಳ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ಹೇಳಿ, ಏನೇ ಆದರೂ ಈ ಜಲಾಶಯಗಳ ಕೆಲಸವನ್ನು ನಿಲ್ಲಿಸುವುದಿಲ್ಲ. ಈಗ ನಡೆಯುತ್ತಿರುವ ರೀತಿಯಲ್ಲೇ ಕೆಲಸ ಮುಂದುವರಿಸಿ ಒಂದೆರಡು ವರ್ಷಗಳಲ್ಲೇ ಜಲಾಶಯ ನಿರ್ಮಾಣವನ್ನು ಪೂರೈಸಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT