ಭದ್ರಾವತಿ, ಜೂನ್ 16– ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಇದ್ದಿಲು ಸರಬರಾಜಿಗೆ ಸಂಬಂಧಪಟ್ಟ ಅಕ್ರಮ ವ್ಯವಹಾರಗಳ ಬಗ್ಗೆ ನಡೆದ ತನಿಖೆಯ ಪರಿಣಾಮವಾಗಿ, ಇದಕ್ಕೆ ನೇರವಾಗಿ ಸಂಬಂಧಪಟ್ಟ, ಕಾರ್ಖಾನೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಹನ್ನೊಂದು ಜನ ನೌಕರರ ಮೇಲೆ ಉಗ್ರ ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿದುಬಂದಿದೆ.