<p>ಬೆಂಗಳೂರು, ಮೇ 23– ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ಕಂದಾಯ ಸಚಿವರಾದ ಎನ್. ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿದರು.</p><p>ಗೋವಿಂದ ಪಿ. ಒಡೆಯರಾಜ್ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಗೈರು<br>ಹಾಜರಿಯಲ್ಲಿ ಉತ್ತರ ನೀಡಿದ ಸಚಿವರು, ಈ ಸಂಬಂಧ ಕೇಂದ್ರ ತನ್ನ ನಿರ್ಧಾರವನ್ನು ತಿಳಿಸಿಲ್ಲ ಎಂದು ಹೇಳಿ, ರಾಜ್ಯದ 5ನೇ ಯೋಜನೆಯಲ್ಲಿ ಈ ಯೋಜನೆಗಾಗಿ 67 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದರು.</p><p><strong>ವಿಶೇಷ ರೈಲಿನಲ್ಲಿ ರಾಜ್ಯಕ್ಕೆ ಹತ್ತು ಸಾವಿರ ಟನ್ ಕಲ್ಲಿದ್ದಲು</strong></p><p>ಬೆಂಗಳೂರು, ಮೇ 23– ಹತ್ತು ಸಾವಿರ ಟನ್ ಕಲ್ಲಿದ್ದಲು ಹೊತ್ತ ವಿಶೇಷ ರೈಲು ರಾಜ್ಯಕ್ಕೆ ಬರುತ್ತಿದೆ ಎಂದು ಕೈಗಾರಿಕಾ ಸಚಿವ ಎಸ್.ಎಂ. ಕೃಷ್ಣ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.</p><p>ಎಂ.ವಿ. ವೆಂಕಟಪ್ಪ ಅವರ ಅಲ್ಪ ಕಾಲಾವಧಿ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಭದ್ರಾವತಿಯಲ್ಲಿನ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿರುವುದು ನಿಜ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಮೇ 23– ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ಕಂದಾಯ ಸಚಿವರಾದ ಎನ್. ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿದರು.</p><p>ಗೋವಿಂದ ಪಿ. ಒಡೆಯರಾಜ್ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಗೈರು<br>ಹಾಜರಿಯಲ್ಲಿ ಉತ್ತರ ನೀಡಿದ ಸಚಿವರು, ಈ ಸಂಬಂಧ ಕೇಂದ್ರ ತನ್ನ ನಿರ್ಧಾರವನ್ನು ತಿಳಿಸಿಲ್ಲ ಎಂದು ಹೇಳಿ, ರಾಜ್ಯದ 5ನೇ ಯೋಜನೆಯಲ್ಲಿ ಈ ಯೋಜನೆಗಾಗಿ 67 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದರು.</p><p><strong>ವಿಶೇಷ ರೈಲಿನಲ್ಲಿ ರಾಜ್ಯಕ್ಕೆ ಹತ್ತು ಸಾವಿರ ಟನ್ ಕಲ್ಲಿದ್ದಲು</strong></p><p>ಬೆಂಗಳೂರು, ಮೇ 23– ಹತ್ತು ಸಾವಿರ ಟನ್ ಕಲ್ಲಿದ್ದಲು ಹೊತ್ತ ವಿಶೇಷ ರೈಲು ರಾಜ್ಯಕ್ಕೆ ಬರುತ್ತಿದೆ ಎಂದು ಕೈಗಾರಿಕಾ ಸಚಿವ ಎಸ್.ಎಂ. ಕೃಷ್ಣ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.</p><p>ಎಂ.ವಿ. ವೆಂಕಟಪ್ಪ ಅವರ ಅಲ್ಪ ಕಾಲಾವಧಿ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಭದ್ರಾವತಿಯಲ್ಲಿನ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿರುವುದು ನಿಜ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>