<p><strong>ಬೆಳಗಾವಿ ಭವಿಷ್ಯ: ಸದ್ಯದಲ್ಲಿ ಕೇಂದ್ರದ ಹೊಸ ಸೂತ್ರ ಇಲ್ಲ</strong></p>.<p><strong>ನವದೆಹಲಿ, ಮೇ 13– </strong>ಬೆಳಗಾವಿ ನಗರದ ಭವಿಷ್ಯದ ಬಗ್ಗೆ ವಿವಾದ ಇತ್ಯರ್ಥಕ್ಕೆ ಕೇಂದ್ರ ಸರ್ಕಾರ ಯಾವ ಹೊಸ ಸೂತ್ರವನ್ನೂ ರೂಪಿಸಿಲ್ಲ.</p>.<p>ರಾಷ್ಟ್ರೀಯ ಹೆದ್ದಾರಿ ಅಥವಾ ರೈಲು ಮಾರ್ಗವನ್ನೇ ಗಡಿ ರೇಖೆಯಾಗಿ ನಗರವನ್ನು ವಿಭಜಿಸುವುದೊಂದೇ ಇದುವರೆಗೆ ಮೈಸೂರು ಮತ್ತು ಮಹಾರಾಷ್ಟ್ರ ಪ್ರತಿನಿಧಿಗಳಿಗೆ ಸೂಚಿಸಿರುವ ಸೂತ್ರ.</p>.<p>ಕೇವಲ ತಾತ್ಕಾಲಿಕ ಎಂದು ಬಣ್ಣಿಸಲಾಗಿದ್ದ ಈ ಸಲಹೆಯನ್ನು ಎರಡೂ ರಾಜ್ಯಗಳು ತಿರಸ್ಕರಿಸಿದ ನಂತರ ಕೇಂದ್ರ ಸರ್ಕಾರವು ವಿವಾದ ಇತ್ಯರ್ಥಕ್ಕೆ ಯಾವ ಹೊಸ ಸೂತ್ರವನ್ನೂ ರೂಪಿಸಿಲ್ಲ.</p>.<p><strong>ಏನೇ ಆಗಲಿ ಕಾವೇರಿ, ಕೃಷ್ಣಾ ಯೋಜನೆಗಳ ಕೆಲಸ ನಿಲ್ಲದು: ಮುಖ್ಯಮಂತ್ರಿ ಘೋಷಣೆ</strong></p>.<p><strong>ಮಡಿಕೇರಿ, ಮೇ 13–</strong> ಹಾರಂಗಿ ನದಿಗೆ ಹುದಗೂರು ಬಳಿ 11 ಕೋಟಿ ರೂ. ವೆಚ್ಚದಲ್ಲಿ ಕಟ್ಟಲಾಗುತ್ತಿರುವ ಜಲಾಶಯದ ಮಣ್ಣಿನ ಅಣೆಕಟ್ಟೆ ಕೆಲಸದ ಗುದ್ದಲಿ ಪೂಜೆಯನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ನೆರವೇರಿಸಿದರು. ಮಣ್ಣಿನ ಅಣೆಕಟ್ಟೆಗೆ 27 ಲಕ್ಷ ರೂ. ವೆಚ್ಚವನ್ನು ಅಂದಾಜು ಮಾಡಲಾಗಿದೆ.</p>.<p>ಹಲವು ವರ್ಷಗಳ ಕೆಳಗೆ ನಿಜಲಿಂಗಪ್ಪನವರು ಈ ಜಲಾಶಯದ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು. ಜಲಾಶಯದ ಕೆಲಸಕ್ಕಾಗಿ ಸರ್ಕಾರ ಈವರೆಗೆ 17 ಲಕ್ಷ ರೂ. ವೆಚ್ಚ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ ಭವಿಷ್ಯ: ಸದ್ಯದಲ್ಲಿ ಕೇಂದ್ರದ ಹೊಸ ಸೂತ್ರ ಇಲ್ಲ</strong></p>.<p><strong>ನವದೆಹಲಿ, ಮೇ 13– </strong>ಬೆಳಗಾವಿ ನಗರದ ಭವಿಷ್ಯದ ಬಗ್ಗೆ ವಿವಾದ ಇತ್ಯರ್ಥಕ್ಕೆ ಕೇಂದ್ರ ಸರ್ಕಾರ ಯಾವ ಹೊಸ ಸೂತ್ರವನ್ನೂ ರೂಪಿಸಿಲ್ಲ.</p>.<p>ರಾಷ್ಟ್ರೀಯ ಹೆದ್ದಾರಿ ಅಥವಾ ರೈಲು ಮಾರ್ಗವನ್ನೇ ಗಡಿ ರೇಖೆಯಾಗಿ ನಗರವನ್ನು ವಿಭಜಿಸುವುದೊಂದೇ ಇದುವರೆಗೆ ಮೈಸೂರು ಮತ್ತು ಮಹಾರಾಷ್ಟ್ರ ಪ್ರತಿನಿಧಿಗಳಿಗೆ ಸೂಚಿಸಿರುವ ಸೂತ್ರ.</p>.<p>ಕೇವಲ ತಾತ್ಕಾಲಿಕ ಎಂದು ಬಣ್ಣಿಸಲಾಗಿದ್ದ ಈ ಸಲಹೆಯನ್ನು ಎರಡೂ ರಾಜ್ಯಗಳು ತಿರಸ್ಕರಿಸಿದ ನಂತರ ಕೇಂದ್ರ ಸರ್ಕಾರವು ವಿವಾದ ಇತ್ಯರ್ಥಕ್ಕೆ ಯಾವ ಹೊಸ ಸೂತ್ರವನ್ನೂ ರೂಪಿಸಿಲ್ಲ.</p>.<p><strong>ಏನೇ ಆಗಲಿ ಕಾವೇರಿ, ಕೃಷ್ಣಾ ಯೋಜನೆಗಳ ಕೆಲಸ ನಿಲ್ಲದು: ಮುಖ್ಯಮಂತ್ರಿ ಘೋಷಣೆ</strong></p>.<p><strong>ಮಡಿಕೇರಿ, ಮೇ 13–</strong> ಹಾರಂಗಿ ನದಿಗೆ ಹುದಗೂರು ಬಳಿ 11 ಕೋಟಿ ರೂ. ವೆಚ್ಚದಲ್ಲಿ ಕಟ್ಟಲಾಗುತ್ತಿರುವ ಜಲಾಶಯದ ಮಣ್ಣಿನ ಅಣೆಕಟ್ಟೆ ಕೆಲಸದ ಗುದ್ದಲಿ ಪೂಜೆಯನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ನೆರವೇರಿಸಿದರು. ಮಣ್ಣಿನ ಅಣೆಕಟ್ಟೆಗೆ 27 ಲಕ್ಷ ರೂ. ವೆಚ್ಚವನ್ನು ಅಂದಾಜು ಮಾಡಲಾಗಿದೆ.</p>.<p>ಹಲವು ವರ್ಷಗಳ ಕೆಳಗೆ ನಿಜಲಿಂಗಪ್ಪನವರು ಈ ಜಲಾಶಯದ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು. ಜಲಾಶಯದ ಕೆಲಸಕ್ಕಾಗಿ ಸರ್ಕಾರ ಈವರೆಗೆ 17 ಲಕ್ಷ ರೂ. ವೆಚ್ಚ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>