<p><strong>ಕಾಳಿನದಿ ಯೋಜನೆಗೆ ಕೂಡಲೇ ಒಪ್ಪಿಗೆಗೆ ಕೇಂದ್ರಕ್ಕೆ ಒತ್ತಾಯ</strong><br /><strong>ಜೋಗ್, ಜೂನ್ 2–</strong> ರಾಜ್ಯದಲ್ಲಿ ಭಾರಿ ಉದ್ದಿಮೆಗಳು ಮತ್ತು ಕೃಷಿರಂಗದಿಂದ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ವಿಳಂಬವಿಲ್ಲದೆ ಕಾಳಿನದಿ ಯೋಜನೆಗೆ ಒಪ್ಪಿಗೆ ನೀಡಬೇಕೆಂದು ರಾಜ್ಯಪಾಲ ಶ್ರೀ ಧರ್ಮವೀರ ಮತ್ತು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಇಲ್ಲಿ ಒತ್ತಾಯಪಡಿಸಿದರು.</p>.<p>ಶರಾವತಿ ವಿದ್ಯುತ್ ಕೇಂದ್ರದಲ್ಲಿ ತಲಾ 89.1 ಕಿಲೊವಾಟ್ ಶಕ್ತಿಯನ್ನು ಉತ್ಪಾದಿಸುವ ಐದು, ಆರು ಮತ್ತು ಏಳನೇ ಘಟಕಗಳನ್ನು ರಾಜ್ಯಪಾಲರು ಉದ್ಘಾಟಿಸಿದರು. ಶರಾವತಿಯನ್ನು ನಮ್ಮ ಆರ್ಥಿಕ ಭವಿಷ್ಯದ ಆಶಾ ಸಂಕೇತ ಎಂದು ಅವರು ವರ್ಣಿಸಿದರು.</p>.<p><strong>ಕೋಮುಶಕ್ತಿಗಳ ದಮನಕ್ಕೆ ಉಗ್ರ ಕ್ರಮ ಕೈಗೊಳ್ಳಲು ಕರೆ</strong><br /><strong>ನವದೆಹಲಿ, ಜೂನ್ 2–</strong> ಕೋಮು ಸಂಘಗಳನ್ನು ನಿಷೇಧಿಸುವ ಸಾಧ್ಯತೆ ಬಗ್ಗೆ ಕೇಂದ್ರದ ಪರಿಶೀಲನೆ ಮತ್ತು ಫಲಿತಾಂಶಕ್ಕಾಗಿ ಕಾಯದೇ ರಾಜ್ಯ ಸರ್ಕಾರಗಳು ಕೋಮು ಶಕ್ತಿಗಳ ದಮನಕ್ಕೆ ಸೂಕ್ತ ಹಾಗೂ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಇಂದಿರಾ ಗಾಂಧಿಯವರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನೀಡಿದ್ದಾರೆ.</p>.<p>ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಅವರು ಈಚೆಗೆ ದೆಹಲಿಯಲ್ಲಿ ಮುಖ್ಯಮಂತ್ರಿಗಳ ಸಭೆಯಲ್ಲಿ ನಡೆದ ಮಾತುಕತೆಗಳನ್ನು ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಿನದಿ ಯೋಜನೆಗೆ ಕೂಡಲೇ ಒಪ್ಪಿಗೆಗೆ ಕೇಂದ್ರಕ್ಕೆ ಒತ್ತಾಯ</strong><br /><strong>ಜೋಗ್, ಜೂನ್ 2–</strong> ರಾಜ್ಯದಲ್ಲಿ ಭಾರಿ ಉದ್ದಿಮೆಗಳು ಮತ್ತು ಕೃಷಿರಂಗದಿಂದ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ವಿಳಂಬವಿಲ್ಲದೆ ಕಾಳಿನದಿ ಯೋಜನೆಗೆ ಒಪ್ಪಿಗೆ ನೀಡಬೇಕೆಂದು ರಾಜ್ಯಪಾಲ ಶ್ರೀ ಧರ್ಮವೀರ ಮತ್ತು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಇಲ್ಲಿ ಒತ್ತಾಯಪಡಿಸಿದರು.</p>.<p>ಶರಾವತಿ ವಿದ್ಯುತ್ ಕೇಂದ್ರದಲ್ಲಿ ತಲಾ 89.1 ಕಿಲೊವಾಟ್ ಶಕ್ತಿಯನ್ನು ಉತ್ಪಾದಿಸುವ ಐದು, ಆರು ಮತ್ತು ಏಳನೇ ಘಟಕಗಳನ್ನು ರಾಜ್ಯಪಾಲರು ಉದ್ಘಾಟಿಸಿದರು. ಶರಾವತಿಯನ್ನು ನಮ್ಮ ಆರ್ಥಿಕ ಭವಿಷ್ಯದ ಆಶಾ ಸಂಕೇತ ಎಂದು ಅವರು ವರ್ಣಿಸಿದರು.</p>.<p><strong>ಕೋಮುಶಕ್ತಿಗಳ ದಮನಕ್ಕೆ ಉಗ್ರ ಕ್ರಮ ಕೈಗೊಳ್ಳಲು ಕರೆ</strong><br /><strong>ನವದೆಹಲಿ, ಜೂನ್ 2–</strong> ಕೋಮು ಸಂಘಗಳನ್ನು ನಿಷೇಧಿಸುವ ಸಾಧ್ಯತೆ ಬಗ್ಗೆ ಕೇಂದ್ರದ ಪರಿಶೀಲನೆ ಮತ್ತು ಫಲಿತಾಂಶಕ್ಕಾಗಿ ಕಾಯದೇ ರಾಜ್ಯ ಸರ್ಕಾರಗಳು ಕೋಮು ಶಕ್ತಿಗಳ ದಮನಕ್ಕೆ ಸೂಕ್ತ ಹಾಗೂ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಇಂದಿರಾ ಗಾಂಧಿಯವರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನೀಡಿದ್ದಾರೆ.</p>.<p>ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಅವರು ಈಚೆಗೆ ದೆಹಲಿಯಲ್ಲಿ ಮುಖ್ಯಮಂತ್ರಿಗಳ ಸಭೆಯಲ್ಲಿ ನಡೆದ ಮಾತುಕತೆಗಳನ್ನು ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>