ಹೈದರಾಬಾದ್, ಜುಲೈ 5– ಆಂಧ್ರ ಮುಖ್ಯಮಂತ್ರಿ ಶ್ರೀ ಕೆ. ಬ್ರಹ್ಮಾನಂದರೆಡ್ಡಿ ಅವರ ‘ರಾಜೀನಾಮೆಯನ್ನು’ ಪರಿಶೀಲಿಸುವುದಕ್ಕಾಗಿ ನಾಳೆ ಇಲ್ಲಿ ಸಭೆ ಸೇರಲಿರುವ ಕಾಂಗ್ರೆಸ್ ಶಾಸಕ ಪಕ್ಷದ ಸಭೆಯನ್ನು ಬಹಿಷ್ಕರಿಸಲು ತೆಲಂಗಾಣ ಪ್ರದೇಶದ 38 ಮಂದಿ ಕಾಂಗ್ರೆಸ್ ಶಾಸಕರು ಇಂದು ನಿರ್ಧರಿಸಿದರು.ಇಂದು ಬೆಳಿಗ್ಗೆ ಇಲ್ಲಿ ನಡೆದ ಶಾಸಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತೆಂದು ಗೊತ್ತಾಗಿದೆ.