‘ಕಳಪೆ ಹಾಗೂ ನಕಲಿ ಕೀಟ ನಾಶಕಗಳಿಂದಾಗಿ ದೇಶದ ಕೃಷಿ ಉತ್ಪನ್ನಗಳು ನಾಶವಾಗುತ್ತಿವೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಬೆಳೆ ಹಾನಿಯಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಇದೇ ಪ್ರಮುಖ ಕಾರಣವಾಗಿದೆ. ಹಾಲಿ ಇರುವ ಕಾನೂನು ಬಿಗಿಯಾಗಿಲ್ಲ. ಇದರಿಂದಾಗಿ ಕಳಪೆ ಕೀಟನಾಶಕಗಳನ್ನು ತಯಾರಿಸಿ ಸರಬರಾಜು ಮಾಡಿದ ಕಂಪನಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುತ್ತಿದ್ದು, ರೈತರ ಹಿತ ಕಾಪಾಡಲು ಬಿಗಿಯಾದ ಹೊಸ ಕಾಯ್ದೆ ಜಾರಿಗೆ ತರುವುದು ಅನಿವಾರ್ಯವಾಗಲಿದೆ’ ಎಂದು ಅವರು ಹೇಳಿದರು.