<p><strong>ಕಾವೇರಿ ಯೋಜನೆಗಳಿಗೆ ಒಪ್ಪಿಗೆ ಕೊಡಿಸಲು ಮಧ್ಯಪ್ರವೇಶಕ್ಕೆ ಕರೆ</strong></p>.<p><strong>ಬೆಂಗಳೂರು, ನ. 2–</strong> ಕಾವೇರಿ ಪ್ರಶ್ನೆಯನ್ನು ಪಂಚಾಯಿತಿಗೆ ಒಪ್ಪಿಸುವುದನ್ನು ‘ಈ ಘಟ್ಟದಲ್ಲಿ’ ಕೇಂದ್ರ ಸರ್ಕಾರ ಯೋಚಿಸಬಾರದೆಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ಪ್ರಧಾನಿ ಅವರನ್ನು ಒತ್ತಾಯ ಮಾಡಿದ್ದಾರೆ.</p>.<p>ಮುಖ್ಯಮಂತ್ರಿಯವರು ಇಂದು ಪ್ರಧಾನಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಮಧ್ಯೆ ಪ್ರವೇಶಿಸಿ ಕಾವೇರಿ ಯೋಜನೆಗಳಿಗೆ ಕೇಂದ್ರ ಮಂಜೂರಾತಿ ನೀಡುವುದರಲ್ಲಿ ಮೈಸೂರು ರಾಜ್ಯದ ಜನತೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರಾರ್ಥಿಸಿದ್ದಾರೆ.</p>.<p><strong>ಸಾಹಿತಿ– ಕಲಾವಿದರಿಗೆ ನಾಡಿನ ಕೃತಜ್ಞತೆ</strong></p>.<p><strong>ಬೆಂಗಳೂರು, ನ. 2–</strong> ನಶಿಸಿ ಹೋಗಬಹುದಾಗಿದ್ದ ಕಲೆಯನ್ನು ‘ಉಪವಾಸವನ್ನಾದರೂ ಮಾಡಿ’ ಉಳಿಸಿ ಬೆಳೆಸಿಕೊಂಡು ಬಂದ ಕಲಾವಿದರಿಗೆ ಗೌರವ ಪ್ರಶಸ್ತಿಗಳನ್ನು ಸಲ್ಲಿಸುವ ಮೂಲಕ ಇಂದು ನಾಡಿನ ಕೃತಜ್ಞತೆಯನ್ನು ಅರ್ಪಿಸಲಾಯಿತು.</p>.<p>ರಾಜ್ಯ ಸಾಹಿತ್ಯ ಅಕಾಡೆಮಿ, ಸಂಗೀತ ನಾಟಕ ಅಕಾಡೆಮಿ ಮತ್ತು ಲಲಿತ ಕಲಾ ಅಕಾಡೆಮಿ ಸಂಯುಕ್ತವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿರಾಜ್ಯಪಾಲ ಶ್ರೀ ಧರ್ಮವೀರರವರು ಇಪ್ಪತ್ತು ಮಂದಿ ಸಾಹಿತಿಗಳು, ಕಲಾವಿದರಿಗೆ ಪ್ರಶಸ್ತಿಗಳನ್ನು ವಿನಿಯೋಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾವೇರಿ ಯೋಜನೆಗಳಿಗೆ ಒಪ್ಪಿಗೆ ಕೊಡಿಸಲು ಮಧ್ಯಪ್ರವೇಶಕ್ಕೆ ಕರೆ</strong></p>.<p><strong>ಬೆಂಗಳೂರು, ನ. 2–</strong> ಕಾವೇರಿ ಪ್ರಶ್ನೆಯನ್ನು ಪಂಚಾಯಿತಿಗೆ ಒಪ್ಪಿಸುವುದನ್ನು ‘ಈ ಘಟ್ಟದಲ್ಲಿ’ ಕೇಂದ್ರ ಸರ್ಕಾರ ಯೋಚಿಸಬಾರದೆಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ಪ್ರಧಾನಿ ಅವರನ್ನು ಒತ್ತಾಯ ಮಾಡಿದ್ದಾರೆ.</p>.<p>ಮುಖ್ಯಮಂತ್ರಿಯವರು ಇಂದು ಪ್ರಧಾನಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಮಧ್ಯೆ ಪ್ರವೇಶಿಸಿ ಕಾವೇರಿ ಯೋಜನೆಗಳಿಗೆ ಕೇಂದ್ರ ಮಂಜೂರಾತಿ ನೀಡುವುದರಲ್ಲಿ ಮೈಸೂರು ರಾಜ್ಯದ ಜನತೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರಾರ್ಥಿಸಿದ್ದಾರೆ.</p>.<p><strong>ಸಾಹಿತಿ– ಕಲಾವಿದರಿಗೆ ನಾಡಿನ ಕೃತಜ್ಞತೆ</strong></p>.<p><strong>ಬೆಂಗಳೂರು, ನ. 2–</strong> ನಶಿಸಿ ಹೋಗಬಹುದಾಗಿದ್ದ ಕಲೆಯನ್ನು ‘ಉಪವಾಸವನ್ನಾದರೂ ಮಾಡಿ’ ಉಳಿಸಿ ಬೆಳೆಸಿಕೊಂಡು ಬಂದ ಕಲಾವಿದರಿಗೆ ಗೌರವ ಪ್ರಶಸ್ತಿಗಳನ್ನು ಸಲ್ಲಿಸುವ ಮೂಲಕ ಇಂದು ನಾಡಿನ ಕೃತಜ್ಞತೆಯನ್ನು ಅರ್ಪಿಸಲಾಯಿತು.</p>.<p>ರಾಜ್ಯ ಸಾಹಿತ್ಯ ಅಕಾಡೆಮಿ, ಸಂಗೀತ ನಾಟಕ ಅಕಾಡೆಮಿ ಮತ್ತು ಲಲಿತ ಕಲಾ ಅಕಾಡೆಮಿ ಸಂಯುಕ್ತವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿರಾಜ್ಯಪಾಲ ಶ್ರೀ ಧರ್ಮವೀರರವರು ಇಪ್ಪತ್ತು ಮಂದಿ ಸಾಹಿತಿಗಳು, ಕಲಾವಿದರಿಗೆ ಪ್ರಶಸ್ತಿಗಳನ್ನು ವಿನಿಯೋಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>