ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ, 23–11–1970

Last Updated 22 ನವೆಂಬರ್ 2020, 19:45 IST
ಅಕ್ಷರ ಗಾತ್ರ

ಭಾರತದ ಮೇಲೆ ನೆರೆ ರಾಷ್ಟ್ರಗಳಿಂದ ಸೇನಾ ದಾಳಿ ಸಂಭವ: ಗೋಲ್ವಾಲ್ಕರ್‌
ನವದೆಹಲಿ, ನ. 22–
ಹಗೆತನ ಹೊಂದಿರುವ ನೆರೆ ರಾಷ್ಟ್ರಗಳಿಂದ ದಾಳಿ ಸಂಭವವಿದೆಯೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಎಂ.ಎಸ್‌. ಗೋಲ್ವಾಲ್ಕರ್‌ ಅವರು ಇಲ್ಲಿ ಇಂದು ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಮತ್ತು ಚೀನಾದ ನಡುವೆ ಮೈತ್ರಿ ಹೆಚ್ಚುತ್ತಿರುವುದನ್ನು ಪ್ರಸ್ತಾಪಿಸಿ, ಅಮೆರಿಕವು ಪಾಕಿಸ್ತಾನಕ್ಕೆ ನೀಡಿರುವ ಶಸ್ತ್ರಾಸ್ತ್ರಗಳು ಭಾರತದ ಮೇಲೆ ದಾಳಿ ಮಾಡಲು ಇವೆರಡೂ ರಾಷ್ಟ್ರಗಳಿಗೆ ಉತ್ತೇಜನ ನೀಡಿವೆಯೆಂದರು.‌‌‌‌

ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದೇ.ಜ.ಗೌ
ಬೆಂಗಳೂರು, ನ. 22–
ಬೆಂಗಳೂರಿನಲ್ಲಿ ಡಿಸೆಂಬರ್‌ ತಿಂಗಳಿನಲ್ಲಿ ನಡೆಯುವ 47ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಶ್ರೀ ದೇ.ಜವರೇಗೌಡ ಅವರು.

ಇಂದು ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಶ್ರೀಯುತರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಶಿಫಾರಸು ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT