ಸಿಂಗಪುರ, ಜ. 21– ಹಿಂದೂ ಮಹಾಸಾಗರದ ವ್ಯಾಪಾರ ಮಾರ್ಗಗಳ ಸುರಕ್ಷತೆ ಬಗ್ಗೆ ಎಂಟು ರಾಷ್ಟ್ರಗಳ ಅಧ್ಯಯನ ತಂಡವು ತನ್ನ ವರದಿ ಸಲ್ಲಿಸುವ ಮುನ್ನವೇ ದಕ್ಷಿಣ ಆಫ್ರಿಕಾಕ್ಕೆ ಶಸ್ತ್ರಾಸ್ತ್ರ ಮಾರಾಟ ಮಾಡುವ ನಿರ್ಧಾರವನ್ನು ಬ್ರಿಟನ್ ಪ್ರಕಟಿಸಿದ್ದಾದರೆ ಆ ಅಧ್ಯಯನ ತಂಡದಿಂದ ಭಾರತ ಹೊರಬೀಳುವುದು ಎಂದು ಭಾರತದ ವಿದೇಶಾಂಗ ಮಂತ್ರಿ ಶ್ರೀ ಸ್ವರಣ್ಸಿಂಗ್ ಅವರು ಇಂದು ಇಲ್ಲಿ ಸೂಚಿಸಿದರು.