<p><strong>ಮತ್ತೆ 51 ವಸ್ತುಗಳ ಆಮದು ವ್ಯಾಪಾರ ಸರ್ಕಾರದ ವಶಕ್ಕೆ<br />ನವದೆಹಲಿ, ಏ. 30–</strong> ವರ್ಷಕ್ಕೆ 130 ಕೋಟಿ ರೂ.ಗಳಷ್ಟು ಮೌಲ್ಯದ 51 ವಸ್ತುಗಳ ಆಮದನ್ನು ಸರ್ಕಾರಿ ಸಂಸ್ಥೆಗಳಿಗೆ ವಹಿಸಿಕೊಡಲಾಗುವುದೆಂದು ವಿದೇಶ ವಾಣಿಜ್ಯ ಸಚಿವ ಎಲ್.ಎನ್.ಮಿಶ್ರಾ ಇಂದು ಪ್ರಕಟಿಸಿದರು.</p>.<p><strong>ಕನ್ನಡಕ್ಕೆ ಶಾಸನಗಳ ಭಾಷಾಂತರ<br />ಬೆಂಗಳೂರು, ಏ. 30–</strong> ಈಚೆಗೆ ಪುನರ್ರಚಿಸಲಾದ ಅಧಿಕೃತ ಭಾಷಾ (ಶಾಸನಗಳಿಗೆ ಸಂಬಂಧಿಸಿದ್ದು) ಆಯೋಗವು ಭಾಷಾ ನೀತಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆ ಮಾಡುವುದರ ಜೊತೆಗೆ ಶಾಸನಗಳನ್ನು ಕನ್ನಡಕ್ಕೆ ಭಾಷಾಂತರಿಸುವ ವಿಷಯವನ್ನೂ ನೋಡಿಕೊಳ್ಳುವುದೆಂದು ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ವರದಿಗಾರರಿಗೆ ತಿಳಿಸಿದರು.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶ್ರೀ ಕೆ.ಆರ್.ಗೋಪಿವಲ್ಲಭ ಅಯ್ಯಂಗಾರ್ ಅವರು ಸಮಿತಿಯ ಅಧ್ಯಕ್ಷರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಶ್ರೀ ಎಂ.ಪಿ.ಎಲ್. ಶಾಸ್ತ್ರಿ, ವಿಧಾನ ಮಂಡಲದ ನಿವೃತ್ತ ಕಾರ್ಯದರ್ಶಿ ಶ್ರೀ ಜಿ.ಎಸ್.ವೆಂಕಟರಮಣ ಅಯ್ಯರ್ ಸದಸ್ಯರು.</p>.<p><strong>ಐದು ದಿನಗಳ ವಾರ- ಎಚ್ಚರದ ಪರಿಶೀಲನೆ<br />ಬೆಂಗಳೂರು, ಏ. 30</strong>– ಸರ್ಕಾರಿ ಕಚೇರಿಗಳಿಗೆ ವಾರಕ್ಕೆ ಎರಡು ದಿನ ರಜ ಕೊಟ್ಟು ಕಚೇರಿಯ ಕಾಲವನ್ನು ಬದಲಾಯಿಸುವ ಬಗ್ಗೆ ಸಾರ್ವಜನಿಕಾಭಿಪ್ರಾಯ ಭಿನ್ನವಾಗಿರುವುದರಿಂದ ಈ ವಿಷಯದಲ್ಲಿ ಎಚ್ಚರಿಕೆಯ ಪರಿಶೀಲನೆ ಅಗತ್ಯವಾಗಿದೆಯೆಂದು ರಾಜ್ಯಪಾಲ ಶ್ರೀ ಧರ್ಮವೀರರವರು ಇಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮತ್ತೆ 51 ವಸ್ತುಗಳ ಆಮದು ವ್ಯಾಪಾರ ಸರ್ಕಾರದ ವಶಕ್ಕೆ<br />ನವದೆಹಲಿ, ಏ. 30–</strong> ವರ್ಷಕ್ಕೆ 130 ಕೋಟಿ ರೂ.ಗಳಷ್ಟು ಮೌಲ್ಯದ 51 ವಸ್ತುಗಳ ಆಮದನ್ನು ಸರ್ಕಾರಿ ಸಂಸ್ಥೆಗಳಿಗೆ ವಹಿಸಿಕೊಡಲಾಗುವುದೆಂದು ವಿದೇಶ ವಾಣಿಜ್ಯ ಸಚಿವ ಎಲ್.ಎನ್.ಮಿಶ್ರಾ ಇಂದು ಪ್ರಕಟಿಸಿದರು.</p>.<p><strong>ಕನ್ನಡಕ್ಕೆ ಶಾಸನಗಳ ಭಾಷಾಂತರ<br />ಬೆಂಗಳೂರು, ಏ. 30–</strong> ಈಚೆಗೆ ಪುನರ್ರಚಿಸಲಾದ ಅಧಿಕೃತ ಭಾಷಾ (ಶಾಸನಗಳಿಗೆ ಸಂಬಂಧಿಸಿದ್ದು) ಆಯೋಗವು ಭಾಷಾ ನೀತಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆ ಮಾಡುವುದರ ಜೊತೆಗೆ ಶಾಸನಗಳನ್ನು ಕನ್ನಡಕ್ಕೆ ಭಾಷಾಂತರಿಸುವ ವಿಷಯವನ್ನೂ ನೋಡಿಕೊಳ್ಳುವುದೆಂದು ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ವರದಿಗಾರರಿಗೆ ತಿಳಿಸಿದರು.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶ್ರೀ ಕೆ.ಆರ್.ಗೋಪಿವಲ್ಲಭ ಅಯ್ಯಂಗಾರ್ ಅವರು ಸಮಿತಿಯ ಅಧ್ಯಕ್ಷರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಶ್ರೀ ಎಂ.ಪಿ.ಎಲ್. ಶಾಸ್ತ್ರಿ, ವಿಧಾನ ಮಂಡಲದ ನಿವೃತ್ತ ಕಾರ್ಯದರ್ಶಿ ಶ್ರೀ ಜಿ.ಎಸ್.ವೆಂಕಟರಮಣ ಅಯ್ಯರ್ ಸದಸ್ಯರು.</p>.<p><strong>ಐದು ದಿನಗಳ ವಾರ- ಎಚ್ಚರದ ಪರಿಶೀಲನೆ<br />ಬೆಂಗಳೂರು, ಏ. 30</strong>– ಸರ್ಕಾರಿ ಕಚೇರಿಗಳಿಗೆ ವಾರಕ್ಕೆ ಎರಡು ದಿನ ರಜ ಕೊಟ್ಟು ಕಚೇರಿಯ ಕಾಲವನ್ನು ಬದಲಾಯಿಸುವ ಬಗ್ಗೆ ಸಾರ್ವಜನಿಕಾಭಿಪ್ರಾಯ ಭಿನ್ನವಾಗಿರುವುದರಿಂದ ಈ ವಿಷಯದಲ್ಲಿ ಎಚ್ಚರಿಕೆಯ ಪರಿಶೀಲನೆ ಅಗತ್ಯವಾಗಿದೆಯೆಂದು ರಾಜ್ಯಪಾಲ ಶ್ರೀ ಧರ್ಮವೀರರವರು ಇಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>