ಮಂಗಳವಾರ, ಮೇ 5– ‘ರಾಜ್ಯದಲ್ಲಿ ಇನ್ನು ಮುಂದೆ ಕಾಫಿ, ರಬ್ಬರ್ ಮುಂತಾದ ಪ್ಲಾಂಟೇಷನ್ ಬೆಳೆಗಳಿಗೆ ಜಮೀನನ್ನು ಖಾಸಗಿ ಬಂಡವಾಳಗಾರರಿಗೆ ಕೊಡುವ ಬದಲು ಬಹುಜನರ ಸ್ವಾಮ್ಯವಿರುವ ಸಹಕಾರಿ ಸಂಸ್ಥೆಗಳಿಗೆ ವಹಿಸಿಕೊಡುವ ಬಗ್ಗೆ ಪರಿಶೀಲಿಸಬೇಕು’ ಎಂದು ರಾಜ್ಯಪಾಲ ಶ್ರೀ ಧರ್ಮವೀರ ಅವರು ಅರಣ್ಯ ಇಲಾಖೆಗೆ ಆದೇಶ ನೀಡಿದ್ದಾರೆ.