ಕಲ್ಕತ್ತ, ಮೇ 8– ಬಾಂಗ್ಲಾದೇಶದಿಂದ ಭಾರಿ ಪ್ರಮಾಣದಲ್ಲಿ ವಲಸೆ ಬರುತ್ತಿರುವ ನಿರಾಶ್ರಿತರ ಹೊಣೆಯನ್ನು ಭಾರತದೊಂದಿಗೆ ಹಂಚಿಕೊಳ್ಳಲು ಮಾನವೀಯ ದೃಷ್ಟಿಯಿಂದ ಮುಂದೆ ಬರಬೇಕೆಂದು ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ತ್ರಿಪುರಾಗಳ ಮುಖ್ಯಮಂತ್ರಿಗಳು ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಮತ್ತು ಸ್ವತಂತ್ರ ರಾಷ್ಟ್ರಗಳಿಗೆ ಜಂಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.