<h3>ಸಂಕೇಶ್ವರದಲ್ಲಿ ಕಾಂಗ್ರೆಸ್ಸಿಗೆ ಜಯ, ನಗರದಲ್ಲಿ ಸೋಲು</h3>.<p>ಬೆಂಗಳೂರು, ಏ. 28– ಪ್ರತಿಷ್ಠೆಯ ಸಂಕೇಶ್ವರ ವಿಧಾನಸಭಾ ಕ್ಷೇತ್ರ ಸ್ಥಾನವನ್ನು ಸಂಸ್ಥಾ ಕಾಂಗ್ರೆಸ್ಸಿನಿಂದ ಮರಳಿ ಪಡೆಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್, ತೀವ್ರ ಪೈಪೋಟಿ ನಡೆದ ಚಾಮರಾಜಪೇಟೆ ಕ್ಷೇತ್ರದಲ್ಲಿ, ಕನ್ನಡ ಚಳವಳಿಗಾರರ ಕೈಯಲ್ಲಿ ಸೋಲನ್ನು ಅನುಭವಿಸಿತು.</p><p>ಈ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವು ಇಂದು ಪ್ರಕಟವಾದಾಗ, ಸಂಕೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಳಾಸಾಹೇಬ ಸಾರವಾಡ ಅವರು ತಮ್ಮ ಪ್ರತಿಸ್ಪರ್ಧಿ ಸಂಸ್ಥಾ ಕಾಂಗ್ರೆಸ್ಸಿನ ಬಿ.ಎ. ಪಾಟೀಲ ಅವರನ್ನು 4,790 ಅಧಿಕ ಮತಗಳಿಂದ ಸೋಲಿಸಿದರು. ಪಕ್ಷೇತರ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ.</p><p><strong>ಕನ್ನಡ ಚಳವಳಿಗಾರರ ಅಭ್ಯರ್ಥಿಗೆ ಜಯ: </strong></p><p>ಏಳು ಮಂದಿ ಸ್ಪರ್ಧಿಸಿದ್ದ ಚಾಮರಾಜಪೇಟೆ ಕ್ಷೇತ್ರದಲ್ಲಿ ಕನ್ನಡ ಚಳವಳಿಗಾರರ ಅಭ್ಯರ್ಥಿ ಪ್ರಭಾಕರ ರೆಡ್ಡಿ ಅವರು ಕಾಂಗ್ರೆಸ್ಸಿನ ವೈ. ರಾಮಚಂದ್ರ ಅವರಿಗಿಂತ ಎರಡು ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿ ವಿಜಯಿಯಾದರು. ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h3>ಸಂಕೇಶ್ವರದಲ್ಲಿ ಕಾಂಗ್ರೆಸ್ಸಿಗೆ ಜಯ, ನಗರದಲ್ಲಿ ಸೋಲು</h3>.<p>ಬೆಂಗಳೂರು, ಏ. 28– ಪ್ರತಿಷ್ಠೆಯ ಸಂಕೇಶ್ವರ ವಿಧಾನಸಭಾ ಕ್ಷೇತ್ರ ಸ್ಥಾನವನ್ನು ಸಂಸ್ಥಾ ಕಾಂಗ್ರೆಸ್ಸಿನಿಂದ ಮರಳಿ ಪಡೆಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್, ತೀವ್ರ ಪೈಪೋಟಿ ನಡೆದ ಚಾಮರಾಜಪೇಟೆ ಕ್ಷೇತ್ರದಲ್ಲಿ, ಕನ್ನಡ ಚಳವಳಿಗಾರರ ಕೈಯಲ್ಲಿ ಸೋಲನ್ನು ಅನುಭವಿಸಿತು.</p><p>ಈ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವು ಇಂದು ಪ್ರಕಟವಾದಾಗ, ಸಂಕೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಳಾಸಾಹೇಬ ಸಾರವಾಡ ಅವರು ತಮ್ಮ ಪ್ರತಿಸ್ಪರ್ಧಿ ಸಂಸ್ಥಾ ಕಾಂಗ್ರೆಸ್ಸಿನ ಬಿ.ಎ. ಪಾಟೀಲ ಅವರನ್ನು 4,790 ಅಧಿಕ ಮತಗಳಿಂದ ಸೋಲಿಸಿದರು. ಪಕ್ಷೇತರ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ.</p><p><strong>ಕನ್ನಡ ಚಳವಳಿಗಾರರ ಅಭ್ಯರ್ಥಿಗೆ ಜಯ: </strong></p><p>ಏಳು ಮಂದಿ ಸ್ಪರ್ಧಿಸಿದ್ದ ಚಾಮರಾಜಪೇಟೆ ಕ್ಷೇತ್ರದಲ್ಲಿ ಕನ್ನಡ ಚಳವಳಿಗಾರರ ಅಭ್ಯರ್ಥಿ ಪ್ರಭಾಕರ ರೆಡ್ಡಿ ಅವರು ಕಾಂಗ್ರೆಸ್ಸಿನ ವೈ. ರಾಮಚಂದ್ರ ಅವರಿಗಿಂತ ಎರಡು ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿ ವಿಜಯಿಯಾದರು. ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>