‘ಮುಖ್ಯವಾಗಿ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರು ಮುಂದಿನ ಎರಡು ಮೂರು ವರ್ಷಗಳವರೆಗೆ ಅಡಿಕೆ ಬೆಳೆ ನೋಡುವಂತಿಲ್ಲ. ತೋಟಗಳನ್ನು ಉಳಿಸಿ, ಪುನರುಜ್ಜೀವನಗೊಳಿಸುವುದೇ ಅವರಿಗೆ ದೊಡ್ಡ ಸಮಸ್ಯೆಯಾಗಿದೆ’ ಎಂದು ಆ ಪ್ರದೇಶಗಳಲ್ಲಿ ತಿರುಗಾಡಿ ಬಂದ ತೋಟಗಾರಿಕೆ ಇಲಾಖೆ ಡೈರೆಕ್ಟರ್ ಡಾ. ಎಂ.ಎಚ್.ಮರಿಗೌಡರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.