ಮುಖ್ಯಮಂತ್ರಿ ನಾಯಕತ್ವದಲ್ಲಿ ದೆಹಲಿಗೆ ಇಷ್ಟರಲ್ಲೇ ಸರ್ವಪಕ್ಷ ನಿಯೋಗ
ಬೆಂಗಳೂರು, ಸೆ. 22– ಅವಸರವಾಗಿ ಹಾಗೂ ಒತ್ತಾಯಕ್ಕೆ ಮಣಿದು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಬರುವುದನ್ನು ತಪ್ಪಿಸುವ ಪ್ರಯತ್ನ ಮಾಡಲು ಸದ್ಯದಲ್ಲೇ ಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಸರ್ವಪಕ್ಷಗಳ ನಿಯೋಗವೊಂದು ದೆಹಲಿಗೆ ಹೋಗುವ ಸಂಭವವಿದೆ.