<h2>ಉಗ್ರ ಚಳವಳಿಗಳ ಹೆದರಿಕೆ: ರಾಜ್ಯಗಳಿಗೆ ಕೇಂದ್ರದ ಮುನ್ನೆಚ್ಚರಿಕೆ</h2><p><strong>ನವದೆಹಲಿ, ಏ. 3–</strong> ಮೇ ತಿಂಗಳಿಂದ ಸೆಪ್ಟೆಂಬರ್ವರೆಗಿನ ಕೊರತೆ ಅವಧಿಯಲ್ಲಿ ಜನತಾ ಚಳವಳಿ ಉಗ್ರ ಸ್ವರೂಪ ತಾಳಿ ಅಪಾಯದ ಮಟ್ಟಕ್ಕೆ ಹೋಗಬಹುದೆಂದೂ ಇದಕ್ಕಾಗಿ ಸಕಾಲಿಕ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದೂ ಕೇಂದ್ರ ಗೃಹ ಖಾತೆಯು ಆಹಾರ ಕೊರತೆ ಇರುವ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಸಿದೆ.</p><p>ಈ ಬಗ್ಗೆ ಕೇಂದ್ರವು ಸುತ್ತೋಲೆಯೊಂದನ್ನು ಕಳುಹಿಸಿದೆ. ಗುಜರಾತ್ ಮತ್ತು ಬಿಹಾರದಲ್ಲಿನ ಘಟನೆಗಳು ಇತರ ಕೊರತೆ ರಾಜ್ಯಗಳಿಗೆ ಮುನ್ನೆಚ್ಚರಿಕೆಯಾಗಿವೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲೂ ಇಂತಹ ಚಳವಳಿಗಳು ಆರಂಭವಾಗಬಹುದು.</p><p>ಪಶ್ಚಿಮ ಬಂಗಾಳದಲ್ಲಿ ಈ ಬೆದರಿಕೆ ಬಹಳ ಹೆಚ್ಚಾಗಿದೆ. ಇಲ್ಲಿ ಆಸ್ಫೋಟಕ ಪರಿಸ್ಥಿತಿಯನ್ನು ತಪ್ಪಿಸಲು ತ್ವರಿತವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ರಾಯ್ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮೊಹಿತಾ ಚರ್ಚಿಸಿದರು.</p><h2>ಹಂತ ಹಂತದ ಪಾನನಿರೋಧ ಜಾರಿ ಇಲ್ಲ: ದೇವರಾಜ ಅರಸು</h2><p><strong>ಬೆಂಗಳೂರು, ಏ. 3–</strong> ರಾಜ್ಯದಲ್ಲಿ ಹಂತ ಹಂತವಾಗಿ ಪಾನನಿರೋಧವನ್ನು ಜಾರಿಗೆ ತರಲು ಸರ್ಕಾರ ಯೋಚಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಡಿ.ದೇವರಾಜ ಅರಸು ಅವರು ಇಂದು ವಿಧಾನಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದರು.</p><p>ಶ್ರೀ ಎಂ.ವಿ.ವೆಂಕಟಪ್ಪ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಗೈರುಹಾಜರಿಯಲ್ಲಿ ಕಂದಾಯ ಸಚಿವ ಶ್ರೀ ಎನ್.ಹುಚ್ಚಮಾಸ್ತಿಗೌಡ ಅವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಉಗ್ರ ಚಳವಳಿಗಳ ಹೆದರಿಕೆ: ರಾಜ್ಯಗಳಿಗೆ ಕೇಂದ್ರದ ಮುನ್ನೆಚ್ಚರಿಕೆ</h2><p><strong>ನವದೆಹಲಿ, ಏ. 3–</strong> ಮೇ ತಿಂಗಳಿಂದ ಸೆಪ್ಟೆಂಬರ್ವರೆಗಿನ ಕೊರತೆ ಅವಧಿಯಲ್ಲಿ ಜನತಾ ಚಳವಳಿ ಉಗ್ರ ಸ್ವರೂಪ ತಾಳಿ ಅಪಾಯದ ಮಟ್ಟಕ್ಕೆ ಹೋಗಬಹುದೆಂದೂ ಇದಕ್ಕಾಗಿ ಸಕಾಲಿಕ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದೂ ಕೇಂದ್ರ ಗೃಹ ಖಾತೆಯು ಆಹಾರ ಕೊರತೆ ಇರುವ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಸಿದೆ.</p><p>ಈ ಬಗ್ಗೆ ಕೇಂದ್ರವು ಸುತ್ತೋಲೆಯೊಂದನ್ನು ಕಳುಹಿಸಿದೆ. ಗುಜರಾತ್ ಮತ್ತು ಬಿಹಾರದಲ್ಲಿನ ಘಟನೆಗಳು ಇತರ ಕೊರತೆ ರಾಜ್ಯಗಳಿಗೆ ಮುನ್ನೆಚ್ಚರಿಕೆಯಾಗಿವೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲೂ ಇಂತಹ ಚಳವಳಿಗಳು ಆರಂಭವಾಗಬಹುದು.</p><p>ಪಶ್ಚಿಮ ಬಂಗಾಳದಲ್ಲಿ ಈ ಬೆದರಿಕೆ ಬಹಳ ಹೆಚ್ಚಾಗಿದೆ. ಇಲ್ಲಿ ಆಸ್ಫೋಟಕ ಪರಿಸ್ಥಿತಿಯನ್ನು ತಪ್ಪಿಸಲು ತ್ವರಿತವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ರಾಯ್ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮೊಹಿತಾ ಚರ್ಚಿಸಿದರು.</p><h2>ಹಂತ ಹಂತದ ಪಾನನಿರೋಧ ಜಾರಿ ಇಲ್ಲ: ದೇವರಾಜ ಅರಸು</h2><p><strong>ಬೆಂಗಳೂರು, ಏ. 3–</strong> ರಾಜ್ಯದಲ್ಲಿ ಹಂತ ಹಂತವಾಗಿ ಪಾನನಿರೋಧವನ್ನು ಜಾರಿಗೆ ತರಲು ಸರ್ಕಾರ ಯೋಚಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಡಿ.ದೇವರಾಜ ಅರಸು ಅವರು ಇಂದು ವಿಧಾನಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದರು.</p><p>ಶ್ರೀ ಎಂ.ವಿ.ವೆಂಕಟಪ್ಪ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಗೈರುಹಾಜರಿಯಲ್ಲಿ ಕಂದಾಯ ಸಚಿವ ಶ್ರೀ ಎನ್.ಹುಚ್ಚಮಾಸ್ತಿಗೌಡ ಅವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>