<p><strong>ಅಕ್ಕಿ–ಗೋಧಿ: ಸಗಟು ವ್ಯಾಪಾರದ ವಹಿವಾಟು ಅರಿಯಲು 2 ಸಮಿತಿ ನೇಮಕ</strong></p>.<p><strong>ನವದೆಹಲಿ, ಜ. 12–</strong> ಗೋಧಿ ಮತ್ತು ಅಕ್ಕಿಯ ಸಗಟು ವ್ಯಾಪಾರವನ್ನು ಈ ವರ್ಷ ವಹಿಸಿಕೊಳ್ಳುವ ಬಗ್ಗೆ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ವಿವರವಾದ ವರದಿಯನ್ನು ತಯಾರಿಸುವ ಸಲುವಾಗಿ ಕೇಂದ್ರ ಸರ್ಕಾರವು ಎರಡು ಸಮಿತಿಗಳನ್ನು ರಚಿಸಿದೆ. ಫೆಬ್ರುವರಿ ಮೊದಲ ವಾರದಲ್ಲಿ ವರದಿ ಸಲ್ಲಿಸಬೇಕೆಂದು ಈ ಎರಡು ಸಮಿತಿಗಳನ್ನು ಕೇಳಲಾಗಿದೆ.</p>.<p>ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ರಚಿಸಲಾದ ಒಂದು ಸಮಿತಿಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಇದ್ದಾರೆ. ಸಗಟು ವ್ಯಾಪಾರಕ್ಕೆ ಬೇಕಾಗುವ ಹಣಕಾಸು ವ್ಯವಸ್ಥೆ ಬಗ್ಗೆ ಈ ಸಮಿತಿ ಪರಿಶೀಲಿಸುತ್ತದೆ. ಮತ್ತೊಂದು ಸಮತಿಯು ಆಡಳಿತ ಸಮಸ್ಯೆಗಳ ಬಗ್ಗೆ ಪರಿಶೀಲಿಸುತ್ತದೆ.</p>.<p><strong>ಅಭಾವ ಪ್ರದೇಶಗಳ ವಿಶೇಷ ಆಯೋಗ ರಚನೆಗೆ ಒತ್ತಾಯ<br />ನವದೆಹಲಿ, ಜ. 12–</strong> ಅಭಾವಕ್ಕೆ ಪದೇ ಪದೇ ತುತ್ತಾಗುವ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ವಿಶೇಷ ಆಯೋಗವನ್ನು ರಚಿಸಲು, ಇಲ್ಲವೇ ಆ ಪ್ರದೇಶದ ಸಮಸ್ಯೆ ನಿವಾರಣೆ ಬಗ್ಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಕೃಷಿ ಆಯೋಗವನ್ನು ಕೋರುವಂತೆ ಎಐಸಿಸಿಯ ಕಿಸಾನ್ಸೆಲ್ (ಕೃಷಿಕರ ವಿಭಾಗ) ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದೆ.</p>.<p>ಬೇರೆ ಬೇರೆ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯಲ್ಲಿ ಆಗುತ್ತಿರುವ ವ್ಯತ್ಯಾಸಗಳನ್ನು ಕಡಿಮೆ ಮಾಡುವುದಕ್ಕಾಗಿ ಕೇಂದ್ರ ಮತ್ತು ರಾಜ್ಯಗಳಲ್ಲಿ ವಿಶೇಷ ಇಲಾಖೆಗಳನ್ನು ಸ್ಥಾಪಿಸಬೇಕೆಂದೂ ಕಿಸಾನ್ಸೆಲ್ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಕ್ಕಿ–ಗೋಧಿ: ಸಗಟು ವ್ಯಾಪಾರದ ವಹಿವಾಟು ಅರಿಯಲು 2 ಸಮಿತಿ ನೇಮಕ</strong></p>.<p><strong>ನವದೆಹಲಿ, ಜ. 12–</strong> ಗೋಧಿ ಮತ್ತು ಅಕ್ಕಿಯ ಸಗಟು ವ್ಯಾಪಾರವನ್ನು ಈ ವರ್ಷ ವಹಿಸಿಕೊಳ್ಳುವ ಬಗ್ಗೆ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ವಿವರವಾದ ವರದಿಯನ್ನು ತಯಾರಿಸುವ ಸಲುವಾಗಿ ಕೇಂದ್ರ ಸರ್ಕಾರವು ಎರಡು ಸಮಿತಿಗಳನ್ನು ರಚಿಸಿದೆ. ಫೆಬ್ರುವರಿ ಮೊದಲ ವಾರದಲ್ಲಿ ವರದಿ ಸಲ್ಲಿಸಬೇಕೆಂದು ಈ ಎರಡು ಸಮಿತಿಗಳನ್ನು ಕೇಳಲಾಗಿದೆ.</p>.<p>ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ರಚಿಸಲಾದ ಒಂದು ಸಮಿತಿಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಇದ್ದಾರೆ. ಸಗಟು ವ್ಯಾಪಾರಕ್ಕೆ ಬೇಕಾಗುವ ಹಣಕಾಸು ವ್ಯವಸ್ಥೆ ಬಗ್ಗೆ ಈ ಸಮಿತಿ ಪರಿಶೀಲಿಸುತ್ತದೆ. ಮತ್ತೊಂದು ಸಮತಿಯು ಆಡಳಿತ ಸಮಸ್ಯೆಗಳ ಬಗ್ಗೆ ಪರಿಶೀಲಿಸುತ್ತದೆ.</p>.<p><strong>ಅಭಾವ ಪ್ರದೇಶಗಳ ವಿಶೇಷ ಆಯೋಗ ರಚನೆಗೆ ಒತ್ತಾಯ<br />ನವದೆಹಲಿ, ಜ. 12–</strong> ಅಭಾವಕ್ಕೆ ಪದೇ ಪದೇ ತುತ್ತಾಗುವ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ವಿಶೇಷ ಆಯೋಗವನ್ನು ರಚಿಸಲು, ಇಲ್ಲವೇ ಆ ಪ್ರದೇಶದ ಸಮಸ್ಯೆ ನಿವಾರಣೆ ಬಗ್ಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಕೃಷಿ ಆಯೋಗವನ್ನು ಕೋರುವಂತೆ ಎಐಸಿಸಿಯ ಕಿಸಾನ್ಸೆಲ್ (ಕೃಷಿಕರ ವಿಭಾಗ) ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದೆ.</p>.<p>ಬೇರೆ ಬೇರೆ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯಲ್ಲಿ ಆಗುತ್ತಿರುವ ವ್ಯತ್ಯಾಸಗಳನ್ನು ಕಡಿಮೆ ಮಾಡುವುದಕ್ಕಾಗಿ ಕೇಂದ್ರ ಮತ್ತು ರಾಜ್ಯಗಳಲ್ಲಿ ವಿಶೇಷ ಇಲಾಖೆಗಳನ್ನು ಸ್ಥಾಪಿಸಬೇಕೆಂದೂ ಕಿಸಾನ್ಸೆಲ್ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>