ಅಭಾವ ಪ್ರದೇಶಗಳ ವಿಶೇಷ ಆಯೋಗ ರಚನೆಗೆ ಒತ್ತಾಯ
ನವದೆಹಲಿ, ಜ. 12– ಅಭಾವಕ್ಕೆ ಪದೇ ಪದೇ ತುತ್ತಾಗುವ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ವಿಶೇಷ ಆಯೋಗವನ್ನು ರಚಿಸಲು, ಇಲ್ಲವೇ ಆ ಪ್ರದೇಶದ ಸಮಸ್ಯೆ ನಿವಾರಣೆ ಬಗ್ಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಕೃಷಿ ಆಯೋಗವನ್ನು ಕೋರುವಂತೆ ಎಐಸಿಸಿಯ ಕಿಸಾನ್ಸೆಲ್ (ಕೃಷಿಕರ ವಿಭಾಗ) ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದೆ.