ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಶುಕ್ರವಾರ, ಮಾರ್ಚ್‌ 9, 1973

Last Updated 8 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ– ಕಾರವಾರ ರೈಲು ಹಾದಿ ಸಮೀಕ್ಷಾ ಕಾರ್ಯ ಸಂಪೂರ್ಣ
ಬೆಂಗಳೂರು, ಮಾರ್ಚ್‌ 8–
ಹುಬ್ಬಳ್ಳಿ–ಕಾರವಾರ ರೈಲು ಮಾರ್ಗ ನಿರ್ಮಾಣದ ಬಗ್ಗೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಸಮೀಕ್ಷಾ ವರದಿ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದೆ.

ವಿಧಾನ ಪರಿಷತ್ತಿನಲ್ಲಿ ಇಂದು ಶ್ರೀ ಎಸ್‌.ಸಿ.ಕುಬ್ಸದ್‌ (ಸಂ.ಕಾಂ) ಅವರ ಪ್ರಶ್ನೆಗೆ ಉತ್ತರಿಸಿದ, ಲೋಕೋ‍ಪಯೋಗಿ ಖಾತೆಯ ಸಚಿವ ಶ್ರೀ ಎಚ್‌.ಎಂ.ಚನ್ನಬಸಪ್ಪ ಅವರು ಕೇಂದ್ರ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.

ಅವಾಮಿ ಲೀಗ್‌ಗೆ ಅತ್ಯದ್ಭುತ ಜಯ: 300ರ ಪೈಕಿ 291 ಸ್ಥಾನಗಳು
ಡಾಕಾ, ಮಾರ್ಚ್‌ 8 –
ಬಾಂಗ್ಲಾದೇಶದ 300 ಮಂದಿ ಸದಸ್ಯರ ರಾಷ್ಟ್ರೀಯ ಸಂಸತ್ತಿಗೆ ಇಂದು ಫಲಿತಾಂಶ ಪ್ರಕಟವಾದ 297 ಸ್ಥಾನಗಳಲ್ಲಿ ಶೇಖ್ ಮುಜೀಬುರ್ ರಹಮಾನ್ ಅವರ ಅವಾಮಿ ಲೀಗ್ ಪಕ್ಷವು 291 ಸ್ಥಾನಗಳನ್ನು ಗೆದ್ದುಕೊಂಡು ಪ್ರಚಂಡ ವಿಜಯ ಸಾಧಿಸಿದೆ.

ಮುಜೀಬ್ ಮತ್ತು ಅವರ ಸಂಪುಟದ ಎಲ್ಲ 22 ಮಂದಿ ಸಚಿವರೂ ಪುನರ್ ಆಯ್ಕೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT