ಮೂಢ ಸಂಪ್ರದಾಯ ಹತ್ತಿಕ್ಕಲು ನಾಂದಿ: ಮಾದರಿ ವಿವಾಹ
ವಿಶೇಷ ಪ್ರತಿನಿಧಿಯಿಂದ, ಜೂನ್ 8– ಮೂಢ ಸಂಪ್ರದಾಯ ವಿರೋಧಿ ಸಮ್ಮೇಳನವೇ ಶುಭ ಸಂದರ್ಭ, ಶುಭ ಮುಹೂರ್ತ. ಮಾರಿಯಮ್ಮನ ಗುಡಿಯ ಬಯಲೇ ಕಲ್ಯಾಣ ಮಂಟಪ, ಸುತ್ತಮುತ್ತಲ ಹಳ್ಳಿಗಳಿಂದ ಬಂದಿದ್ದ ಐದು ಸಾವಿರಕ್ಕಿಂತ ಹೆಚ್ಚು ಮಂದಿ ಪುರುಷರು, ಮಹಿಳೆಯರೇ ‘ಹತ್ತು ಸಮಸ್ತರು.’ ನೆರೆದಿದ್ದವರ ಕರತಾಡನವೇ ಆರತಿ–ಅಕ್ಷತೆ ಹಾಗೂ ಆಶೀರ್ವಾದ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹರಿಜನ ಕೆ.ಎಚ್. ರಂಗನಾಥ್ ಅವರದ್ದೇ ಪೌರೋಹಿತ್ಯ. ಅಭಿವೃದ್ಧಿ ಸಚಿವ, ಮತ್ತೊಬ್ಬ ಹರಿಜನ ಎಂ.ಮಲ್ಲಿಕಾರ್ಜುನ ಸ್ವಾಮಿ ಅವರು ಉದ್ಘಾಟಿಸಿದುದೇ ಮಂಗಳವಾದ್ಯ.