<p><strong>ಒಂದು ವಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗ</strong></p><p><strong>ಬೆಂಗಳೂರು, ಡಿ. 22–</strong> ಮುಖ್ಯಮಂತ್ರಿ ಅರಸು ನಾಯಕತ್ವದಲ್ಲಿ ರಾಜ್ಯದ ವಿಧಾನಮಂಡಲದ ನಿಯೋಗವೊಂದು ಇನ್ನೊಂದು ವಾರದಲ್ಲಿ ದೆಹಲಿಗೆ ತೆರಳಿ ಮಹಾಜನ್ ವರದಿಯನ್ನು ಕಾರ್ಯರೂಪಕ್ಕೆ ತರಬೇಕೆಂಬ ಬೇಡಿಕೆಯನ್ನು ಪ್ರತಿಪಾದಿಸಿ, ಪ್ರಧಾನಿ ಹಾಗೂ ಕೇಂದ್ರದ ಇತರ ನಾಯಕರಿಗೆ ಮನವಿ ಸಲ್ಲಿಸಲಿದೆ. </p><p>ಮುಖ್ಯಮಂತ್ರಿ ಅರಸು ಅವರು ಇಂದು ಸಂಜೆ ವಿಧಾನಸೌಧದಲ್ಲಿ ವಿರೋಧ ಪಕ್ಷಗಳ ನಾಯಕರೊಡನೆ ಗಡಿ ವಿವಾದದ ಕುರಿತು ಮತ್ತೆ ಚರ್ಚೆ ನಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರು ಅನುಭವಿಸಿರುವ 10–12 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ತುಂಬಿಕೊಡಬೇಕು ಎಂದು ಕೇಂದ್ರವನ್ನು ನಿಯೋಗ ಒತ್ತಾಯ ಮಾಡಲಿದೆ. </p><p>ಸಂಜೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಎಚ್.ಡಿ. ದೇವೇಗೌಡ, ಕಮ್ಯುನಿಸ್ಟ್ ಪಕ್ಷದ ಎಂ.ಎಸ್. ಕೃಷ್ಣನ್, ಸೋಷಲಿಸ್ಟ್ ಪಕ್ಷದ ಕಾಗೋಡು ತಿಮ್ಮಪ್ಪ, ಕ್ರಾಂತಿಕಾರಿ ಪಕ್ಷದ ಎಸ್. ಬಂಗಾರಪ್ಪ ಹಾಗೂ ಟಿ.ಆರ್. ಶಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಂದು ವಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗ</strong></p><p><strong>ಬೆಂಗಳೂರು, ಡಿ. 22–</strong> ಮುಖ್ಯಮಂತ್ರಿ ಅರಸು ನಾಯಕತ್ವದಲ್ಲಿ ರಾಜ್ಯದ ವಿಧಾನಮಂಡಲದ ನಿಯೋಗವೊಂದು ಇನ್ನೊಂದು ವಾರದಲ್ಲಿ ದೆಹಲಿಗೆ ತೆರಳಿ ಮಹಾಜನ್ ವರದಿಯನ್ನು ಕಾರ್ಯರೂಪಕ್ಕೆ ತರಬೇಕೆಂಬ ಬೇಡಿಕೆಯನ್ನು ಪ್ರತಿಪಾದಿಸಿ, ಪ್ರಧಾನಿ ಹಾಗೂ ಕೇಂದ್ರದ ಇತರ ನಾಯಕರಿಗೆ ಮನವಿ ಸಲ್ಲಿಸಲಿದೆ. </p><p>ಮುಖ್ಯಮಂತ್ರಿ ಅರಸು ಅವರು ಇಂದು ಸಂಜೆ ವಿಧಾನಸೌಧದಲ್ಲಿ ವಿರೋಧ ಪಕ್ಷಗಳ ನಾಯಕರೊಡನೆ ಗಡಿ ವಿವಾದದ ಕುರಿತು ಮತ್ತೆ ಚರ್ಚೆ ನಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರು ಅನುಭವಿಸಿರುವ 10–12 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ತುಂಬಿಕೊಡಬೇಕು ಎಂದು ಕೇಂದ್ರವನ್ನು ನಿಯೋಗ ಒತ್ತಾಯ ಮಾಡಲಿದೆ. </p><p>ಸಂಜೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಎಚ್.ಡಿ. ದೇವೇಗೌಡ, ಕಮ್ಯುನಿಸ್ಟ್ ಪಕ್ಷದ ಎಂ.ಎಸ್. ಕೃಷ್ಣನ್, ಸೋಷಲಿಸ್ಟ್ ಪಕ್ಷದ ಕಾಗೋಡು ತಿಮ್ಮಪ್ಪ, ಕ್ರಾಂತಿಕಾರಿ ಪಕ್ಷದ ಎಸ್. ಬಂಗಾರಪ್ಪ ಹಾಗೂ ಟಿ.ಆರ್. ಶಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>