ಭದ್ರಾವತಿ ಉಕ್ಕು ಕಾರ್ಖಾನೆ ವೈಫಲ್ಯ ತನಿಖೆಗೆ ಮಾಜಿ ಮುಖ್ಯ ಕಾರ್ಯದರ್ಶಿ
ಬೆಂಗಳೂರು, ಏ. 8– ಭದ್ರಾವತಿಯ ಮೈಸೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕೆಲವು ವಿಚಾರಗಳ ಬಗ್ಗೆ ಇನ್ನೂ ಕೂಲಂಕಷ ತನಿಖೆ ನಡೆಸಲು ಮತ್ತು ಕೆಲವು ವೈಫಲ್ಯಗಳ ಬಗ್ಗೆ ಜವಾಬ್ದಾರಿ ಗೊತ್ತುಪಡಿಸಲು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ನಾರಾಯಣಸ್ವಾಮಿ ಅವರನ್ನು ಆರು ತಿಂಗಳ ಅವಧಿಗೆ ನೇಮಕ ಮಾಡಲಾಗಿದೆಯೆಂದು ಕೈಗಾರಿಕೆ ಸಚಿವ ಎಸ್.ಎಂ.ಕೃಷ್ಣ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.