<p><strong>ವೈದ್ಯಕೀಯ ವಿದ್ಯಾರ್ಥಿಗಳ ಹಿತ ರಕ್ಷಿಸುವ ಭರವಸೆ</strong></p><p><strong>ಬೆಂಗಳೂರು, ಏ. 10</strong>– ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತವನ್ನು ರಕ್ಷಿಸಲಾಗುವುದೆಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವ ಎಚ್.ಸಿದ್ಧವೀರಪ್ಪ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಈ ಸಂಬಂಧದಲ್ಲಿ ಯಾರೂ ಕಳವಳಪಡಬಾರದೆಂದು ಹೇಳಿದ ಸಚಿವರು, ಮಟ್ಟವನ್ನು ಉತ್ತಮಗೊಳಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದೆಂದರು.</p>.<p>ರಾಜ್ಯದ ಐದು ಮೆಡಿಕಲ್ ಕಾಲೇಜುಗಳಿಗೆ ಮಾನ್ಯತೆ ನೀಡಬಾರದೆಂದು ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿರ್ಣಯದ ಸಂಬಂಧದಲ್ಲಿ ತಾವು ಕೇಂದ್ರ ಸರ್ಕಾರದ ಆರೋಗ್ಯ ಸಚಿವರೊಡನೆ ಇತ್ತೀಚೆಗೆ ಮಾತುಕತೆ ನಡೆಸಿರುವುದಾಗಿ ಹೇಳಿದರು.</p>.<p><strong>ಸಚಿವರ ಹೇಳಿಕೆ ಬಗ್ಗೆ ಅತೃಪ್ತಿ: ಸಭಾತ್ಯಾಗ</strong></p><p><strong>ಬೆಂಗಳೂರು, ಏ. 10–</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಹಾರ ಹಂಚಿಕೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಸಂಬಂಧದಲ್ಲಿ ಆಹಾರ ಸಚಿವರ ಹೇಳಿಕೆ ತೃಪ್ತಿಕರವಾಗಿಲ್ಲ ಎಂದು ಹೇಳಿ ಕಮ್ಯುನಿಸ್ಟ್ ಪಕ್ಷದ ಸದಸ್ಯ ರೊಬ್ಬರು ಇಂದು ವಿಧಾನಸಭೆಯಲ್ಲಿ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈದ್ಯಕೀಯ ವಿದ್ಯಾರ್ಥಿಗಳ ಹಿತ ರಕ್ಷಿಸುವ ಭರವಸೆ</strong></p><p><strong>ಬೆಂಗಳೂರು, ಏ. 10</strong>– ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತವನ್ನು ರಕ್ಷಿಸಲಾಗುವುದೆಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವ ಎಚ್.ಸಿದ್ಧವೀರಪ್ಪ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಈ ಸಂಬಂಧದಲ್ಲಿ ಯಾರೂ ಕಳವಳಪಡಬಾರದೆಂದು ಹೇಳಿದ ಸಚಿವರು, ಮಟ್ಟವನ್ನು ಉತ್ತಮಗೊಳಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದೆಂದರು.</p>.<p>ರಾಜ್ಯದ ಐದು ಮೆಡಿಕಲ್ ಕಾಲೇಜುಗಳಿಗೆ ಮಾನ್ಯತೆ ನೀಡಬಾರದೆಂದು ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿರ್ಣಯದ ಸಂಬಂಧದಲ್ಲಿ ತಾವು ಕೇಂದ್ರ ಸರ್ಕಾರದ ಆರೋಗ್ಯ ಸಚಿವರೊಡನೆ ಇತ್ತೀಚೆಗೆ ಮಾತುಕತೆ ನಡೆಸಿರುವುದಾಗಿ ಹೇಳಿದರು.</p>.<p><strong>ಸಚಿವರ ಹೇಳಿಕೆ ಬಗ್ಗೆ ಅತೃಪ್ತಿ: ಸಭಾತ್ಯಾಗ</strong></p><p><strong>ಬೆಂಗಳೂರು, ಏ. 10–</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಹಾರ ಹಂಚಿಕೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಸಂಬಂಧದಲ್ಲಿ ಆಹಾರ ಸಚಿವರ ಹೇಳಿಕೆ ತೃಪ್ತಿಕರವಾಗಿಲ್ಲ ಎಂದು ಹೇಳಿ ಕಮ್ಯುನಿಸ್ಟ್ ಪಕ್ಷದ ಸದಸ್ಯ ರೊಬ್ಬರು ಇಂದು ವಿಧಾನಸಭೆಯಲ್ಲಿ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>