ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷದ ಹಿಂದೆ: ಭಾನುವಾರ, 3–1–1971

Last Updated 2 ಜನವರಿ 2021, 19:31 IST
ಅಕ್ಷರ ಗಾತ್ರ

ರಾಜ್ಯ ವಿಧಾನಸಭೆ ವಿಸರ್ಜನೆ ಇಲ್ಲ
ಬೆಂಗಳೂರು, ಜ.2–
ಇಂದು ನಡೆದ ಮಂತ್ರಿಮಂಡಲದ ಅನೌ‍ಪಚಾರಿಕ ಸಭೆ ವಿಧಾನಸಭೆಯ ವಿಸರ್ಜನೆ ಕುರಿತು ‘ಯೋಚಿಸಬಾರದೆಂದು’ ಸರ್ವಾನುಮತದಿಂದ ತೀರ್ಮಾನಿಸಿತು.

ಸಚಿವರು, ರಾಜ್ಯ ಸಚಿವರು ಹಾಗೂ ಉಪಸಚಿವರು ಹಾಜರಿದ್ದ ಈ ಸನೌಪಚಾರಿಕ ಸಭೆ ಸುಮಾರು ಎರಡು ಗಂಟೆಗಳ ಕಾಲ ಲೋಕಸಭೆಯ ಮಧ್ಯಂತರ ಚುನಾವಣೆಯ ಜೊತೆಗೆ ಚುನಾವಣೆ ನಡೆಸಲು ವಿಧಾನಸಭೆಯನ್ನು ವಿಸರ್ಜಿಸಬೇಕೆ ಬೇಡವೇ ಎಂಬ ಪ್ರಶ್ನೆಯನ್ನು ‘ಸರ್ವಮುಖಗಳಿಂದ ಪರಿಶೀಲಿಸಿ’ ಈ ಒಮ್ಮತದ ತೀರ್ಮಾನಕ್ಕೆ ಬಂದಿತು.

ಸಭೆಯ ತೀರ್ಮಾನವನ್ನು ವರದಿಗಾರರಿಗೆ ತಿಳಿಸಿದ ಮುಖ್ಯಮಂತ್ರಿ ಶ್ರೀ ವೀರೇಂದ್ರಪಾಟೀಲ್‌ ಅವರು ಈ ಪ್ರಶ್ನೆಯ ಬಗ್ಗೆ ಮಂತ್ರಿಮಂಡಲದಲ್ಲಿ ಭಿನ್ನಾಭಿಪ್ರಾಯಗಳಿವೆಯಂಬ ವರದಿಯನ್ನು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT