<p><strong>ಎಂ.ಪಿ.ಸಿ.ಸಿ. (ಸಂಸ್ಥಾ) ಅಧ್ಯಕ್ಷರಾಗಿ ವೀರೇಂದ್ರ ಪಾಟೀಲ್<br />ಬೆಂಗಳೂರು, ಮೇ 10–</strong> ಮಾಜಿ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ಇಂದು ಸಂಸ್ಥಾ ಕಾಂಗ್ರೆಸ್ಸಿನ ಮೈಸೂರು ಪ್ರದೇಶ ಸಮಿತಿಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಚುನಾಯಿತರಾದರು.</p>.<p>ಈ ಜವಾಬ್ದಾರಿಯನ್ನು ಹೊರಲು ಮೊದಲಿನಿಂದಲೂ ಬೇಡವೆನ್ನುತ್ತಿದ್ದ ಶ್ರೀಯುತರು, ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ನಿಜಲಿಂಗಪ್ಪ ಅವರಾದಿಯಾಗಿ ಸ್ನೇಹಿತರ ಒತ್ತಾಯಕ್ಕೆ ಮಣಿದು ಕಡೆಯಲ್ಲಿ ಪ್ರದೇಶ ಸಮಿತಿ ಅಧ್ಯಕ್ಷರಾಗಲು ಒಪ್ಪಿಕೊಂಡರು.</p>.<p>ಲೋಕಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜ್ಯದಲ್ಲಿ ಸಂಸ್ಥಾ ಕಾಂಗ್ರೆಸ್ ಭಾರಿ ಅಪಜಯ ಹೊಂದಿ, ಆನಂತರ ಅದರ ನೇತೃತ್ವದ ಸರ್ಕಾರವೂ ರಾಜೀನಾಮೆ ಕೊಡಬೇಕಾಗಿ ಬಂದ ಘಟನೆಯ ನಂತರ, ನೂತನ ಪ್ರದೇಶ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸೂಕ್ತರಾದವರನ್ನಾರಿಸುವ ವಿಷಯದ ಕುರಿತು ಈ ಕಾಂಗ್ರೆಸ್ಸಿನಲ್ಲಿ ಕೆಲ ದಿನಗಳಿಂದ ಚರ್ಚೆ ನಡೆಯುತ್ತಿತ್ತು.</p>.<p>ಈ ಸಂಬಂಧದಲ್ಲಿ ಸರ್ವಶ್ರೀ ವೀರೇಂದ್ರ ಪಾಟೀಲ್, ರಾಮಕೃಷ್ಣ ಹೆಗಡೆ, ಕೆ.ವಿ.ಶಂಕರಗೌಡ ಹಾಗೂ ಡಾ. ಎಚ್.ಎಲ್.ತಿಮ್ಮೇಗೌಡ ಅವರುಗಳ ಹೆಸರುಗಳು ಪ್ರಸ್ತಾಪದಲ್ಲಿದ್ದವು. ಆದರೆ ಇವರಾರೂ ಒಪ್ಪದೆ, ಕಡೆಗೆ ಶ್ರೀ ವೀರೇಂದ್ರ ಪಾಟೀಲ್ ಅವರ ಮೇಲೆ ಎಲ್ಲರ ಒತ್ತಾಯ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಪಿ.ಸಿ.ಸಿ. (ಸಂಸ್ಥಾ) ಅಧ್ಯಕ್ಷರಾಗಿ ವೀರೇಂದ್ರ ಪಾಟೀಲ್<br />ಬೆಂಗಳೂರು, ಮೇ 10–</strong> ಮಾಜಿ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ಇಂದು ಸಂಸ್ಥಾ ಕಾಂಗ್ರೆಸ್ಸಿನ ಮೈಸೂರು ಪ್ರದೇಶ ಸಮಿತಿಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಚುನಾಯಿತರಾದರು.</p>.<p>ಈ ಜವಾಬ್ದಾರಿಯನ್ನು ಹೊರಲು ಮೊದಲಿನಿಂದಲೂ ಬೇಡವೆನ್ನುತ್ತಿದ್ದ ಶ್ರೀಯುತರು, ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ನಿಜಲಿಂಗಪ್ಪ ಅವರಾದಿಯಾಗಿ ಸ್ನೇಹಿತರ ಒತ್ತಾಯಕ್ಕೆ ಮಣಿದು ಕಡೆಯಲ್ಲಿ ಪ್ರದೇಶ ಸಮಿತಿ ಅಧ್ಯಕ್ಷರಾಗಲು ಒಪ್ಪಿಕೊಂಡರು.</p>.<p>ಲೋಕಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜ್ಯದಲ್ಲಿ ಸಂಸ್ಥಾ ಕಾಂಗ್ರೆಸ್ ಭಾರಿ ಅಪಜಯ ಹೊಂದಿ, ಆನಂತರ ಅದರ ನೇತೃತ್ವದ ಸರ್ಕಾರವೂ ರಾಜೀನಾಮೆ ಕೊಡಬೇಕಾಗಿ ಬಂದ ಘಟನೆಯ ನಂತರ, ನೂತನ ಪ್ರದೇಶ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸೂಕ್ತರಾದವರನ್ನಾರಿಸುವ ವಿಷಯದ ಕುರಿತು ಈ ಕಾಂಗ್ರೆಸ್ಸಿನಲ್ಲಿ ಕೆಲ ದಿನಗಳಿಂದ ಚರ್ಚೆ ನಡೆಯುತ್ತಿತ್ತು.</p>.<p>ಈ ಸಂಬಂಧದಲ್ಲಿ ಸರ್ವಶ್ರೀ ವೀರೇಂದ್ರ ಪಾಟೀಲ್, ರಾಮಕೃಷ್ಣ ಹೆಗಡೆ, ಕೆ.ವಿ.ಶಂಕರಗೌಡ ಹಾಗೂ ಡಾ. ಎಚ್.ಎಲ್.ತಿಮ್ಮೇಗೌಡ ಅವರುಗಳ ಹೆಸರುಗಳು ಪ್ರಸ್ತಾಪದಲ್ಲಿದ್ದವು. ಆದರೆ ಇವರಾರೂ ಒಪ್ಪದೆ, ಕಡೆಗೆ ಶ್ರೀ ವೀರೇಂದ್ರ ಪಾಟೀಲ್ ಅವರ ಮೇಲೆ ಎಲ್ಲರ ಒತ್ತಾಯ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>