ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಶನಿವಾರ, 15-5-1971

Last Updated 14 ಮೇ 2021, 19:30 IST
ಅಕ್ಷರ ಗಾತ್ರ

ಕಾವೇರಿ ನೀರಾವರಿ ಯೋಜನೆ ಮಂಜೂರಾತಿಗೆ ಕೋರಿಕೆ: ರಾಜ್ಯಪಾಲರ ಸ್ಪಷ್ಟನೆ
ಬೆಂಗಳೂರು, ಮೇ 14–
1924ರ ಒಪ್ಪಂದದ ಸಂಬಂಧವಿಲ್ಲದೆ ಕಾವೇರಿ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಬೇಕೆಂಬುದು ರಾಜ್ಯ ಸರ್ಕಾರದ ನಿಲುವೆಂದು ರಾಜ್ಯಪಾಲ ಶ್ರೀ ಧರ್ಮವೀರರವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.

ಕಾವೇರಿ ನೀರು ಹಂಚಿಕೆಯ 1924ರ ಒಪ್ಪಂದಕ್ಕೆ ರಾಜ್ಯ ಸರ್ಕಾರ ಬದ್ಧವಾಗುವುದೆಂದೂ ಇದನ್ನು ಬರಹದಲ್ಲಿ ನೀಡಲು ತಾವು ಸಿದ್ಧವೆಂದೂ ಕೇಂದ್ರಕ್ಕೆ ಮೈಸೂರಿನ ರಾಜ್ಯಪಾಲರು ಭರವಸೆ ನೀಡಿದ್ದಾರೆಂಬ ಪತ್ರಿಕಾ ವರದಿಯನ್ನು ಶ್ರೀ ಧರ್ಮವೀರರವರು ಪತ್ರಿಕಾಗೋಷ್ಠಿಯಲ್ಲಿ ನಿರಾಕರಿಸಿ, ‘ನಾನು ಯಾರಿಗೂ ಆ ರೀತಿ ಭರವಸೆ ನೀಡಿಲ್ಲ’ ಎಂದರು.

ದೆಹಲಿಯಿಂದ ಹಿಂತಿರುಗಿದ ಶ್ರೀ ಧರ್ಮವೀರರವರು ಕಾವೇರಿ ನೀರಾವರಿ ಯೋಜನೆಗಳ ಬಗ್ಗೆ ಈಗಿರುವ ಸ್ಥಿತಿಯೇ ಮುಂದುವರಿಯುವಂತೆ ಕಂಡುಬರುವುದೆಂದರು.

ಬಾಂಗ್ಲಾದೇಶಕ್ಕೆ ಮಾನ್ಯತೆ ನೀಡಲು ಸಂಸ್ಥಾ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಒತ್ತಾಯ
ಮುನ್ಷಿನಗರ (ಮುಂಬಯಿ), ಮೇ 14–
ಬಾಂಗ್ಲಾ ದೇಶಕ್ಕೆ ಪರಮಾಧಿಕಾರ ವುಳ್ಳ ಪ್ರತ್ಯೇಕ ರಾಷ್ಟ್ರವೆಂದು ಶೀಘ್ರವೇ ಮಾನ್ಯತೆ ನೀಡುವಂತೆ ಸಂಸ್ಥಾ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT