<p><strong>ಅರ್ಹ ಕೆಳದರ್ಜೆ ನೌಕರರು ಉನ್ನತ ದರ್ಜೆಗೆ ಏರಲು ತಕ್ಕ ಕಾರ್ಮಿಕ ನೀತಿಗೆ ಕೆಂಗಲ್ ಕರೆ<br />ಬೆಂಗಳೂರು, ಜುಲೈ 5–</strong> ಯೋಗ್ಯತೆ, ನಿಸ್ಪೃಹತೆ ಮತ್ತು ಕೌಶಲ ಇರುವ ಕೆಳದರ್ಜೆಯ ನೌಕರ, ಸಂಸ್ಥೆಯ ಉನ್ನತ ದರ್ಜೆಗೆ ಏರುವುದಕ್ಕೆ ಅವಕಾಶವಿರುವ ಕಾರ್ಮಿಕ ನೀತಿ ಅನುಸರಣೆ ಅಗತ್ಯವೆಂದು ಕೇಂದ್ರ ರೈಲ್ವೆ ಸಚಿವ ಶ್ರೀ ಕೆ.ಹನುಮಂತಯ್ಯ ಅವರು ಇಂದು ಇಲ್ಲಿ ನುಡಿದರು.</p>.<p>ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ಮೈಸೂರು ವಿಭಾಗದ ರೈಲ್ವೆ ನೌಕರರ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ಇಂತಹ ಕ್ರಾಂತಿಕಾರಿ ನೀತಿಯ ಬಗ್ಗೆ ಪ್ರಧಾನ ಮಂತ್ರಿಯವರು ಯೋಚಿಸಿರುವರೆಂದು ಹೇಳಿ, ಆಡಳಿತ ವರ್ಗ ಮತ್ತು ಕಾರ್ಮಿಕರ ದರ್ಜೆಗಳ ವರ್ಗೀಕರಣ ಸಲ್ಲದೆಂದೂ ಅದು ಕೇವಲ ಬ್ರಿಟಿಷರ ಪದ್ಧತಿಯಾಗಿತ್ತೆಂದೂ ವಿವರಿಸಿದರು.</p>.<p><strong>ಆತುರದ ನಿರ್ಧಾರ ಅನುಚಿತ ಎಂದು ಪ್ರಧಾನಿ ಇಂದಿರಾ</strong><br /><strong>ನವದೆಹಲಿ, ಜುಲೈ 5–</strong> ಬಾಂಗ್ಲಾ ದೇಶಕ್ಕೆ ಮಾನ್ಯತೆ ನೀಡುವ ಬಗ್ಗೆ ಪೂರ್ಣವಾಗಿ ನಂಬಿಕೆ ಮೂಡುವವರೆಗೆ, ಸರ್ಕಾರವು ಒತ್ತಾಯಕ್ಕೆ ಮಣಿದು ಆತುರದ ನಿರ್ಧಾರ ಕೈಗೊಳ್ಳುವುದು ಅನುಚಿತವಾಗುತ್ತದೆ ಎಂದು ಪ್ರಧಾನಿ ಇಂದಿರಾ ಗಾಂಧಿ ಅವರು ಇಂದು ಆಡಳಿತ ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯನಿರ್ವಾಹಕ ಸಮಿತಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರ್ಹ ಕೆಳದರ್ಜೆ ನೌಕರರು ಉನ್ನತ ದರ್ಜೆಗೆ ಏರಲು ತಕ್ಕ ಕಾರ್ಮಿಕ ನೀತಿಗೆ ಕೆಂಗಲ್ ಕರೆ<br />ಬೆಂಗಳೂರು, ಜುಲೈ 5–</strong> ಯೋಗ್ಯತೆ, ನಿಸ್ಪೃಹತೆ ಮತ್ತು ಕೌಶಲ ಇರುವ ಕೆಳದರ್ಜೆಯ ನೌಕರ, ಸಂಸ್ಥೆಯ ಉನ್ನತ ದರ್ಜೆಗೆ ಏರುವುದಕ್ಕೆ ಅವಕಾಶವಿರುವ ಕಾರ್ಮಿಕ ನೀತಿ ಅನುಸರಣೆ ಅಗತ್ಯವೆಂದು ಕೇಂದ್ರ ರೈಲ್ವೆ ಸಚಿವ ಶ್ರೀ ಕೆ.ಹನುಮಂತಯ್ಯ ಅವರು ಇಂದು ಇಲ್ಲಿ ನುಡಿದರು.</p>.<p>ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ಮೈಸೂರು ವಿಭಾಗದ ರೈಲ್ವೆ ನೌಕರರ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ಇಂತಹ ಕ್ರಾಂತಿಕಾರಿ ನೀತಿಯ ಬಗ್ಗೆ ಪ್ರಧಾನ ಮಂತ್ರಿಯವರು ಯೋಚಿಸಿರುವರೆಂದು ಹೇಳಿ, ಆಡಳಿತ ವರ್ಗ ಮತ್ತು ಕಾರ್ಮಿಕರ ದರ್ಜೆಗಳ ವರ್ಗೀಕರಣ ಸಲ್ಲದೆಂದೂ ಅದು ಕೇವಲ ಬ್ರಿಟಿಷರ ಪದ್ಧತಿಯಾಗಿತ್ತೆಂದೂ ವಿವರಿಸಿದರು.</p>.<p><strong>ಆತುರದ ನಿರ್ಧಾರ ಅನುಚಿತ ಎಂದು ಪ್ರಧಾನಿ ಇಂದಿರಾ</strong><br /><strong>ನವದೆಹಲಿ, ಜುಲೈ 5–</strong> ಬಾಂಗ್ಲಾ ದೇಶಕ್ಕೆ ಮಾನ್ಯತೆ ನೀಡುವ ಬಗ್ಗೆ ಪೂರ್ಣವಾಗಿ ನಂಬಿಕೆ ಮೂಡುವವರೆಗೆ, ಸರ್ಕಾರವು ಒತ್ತಾಯಕ್ಕೆ ಮಣಿದು ಆತುರದ ನಿರ್ಧಾರ ಕೈಗೊಳ್ಳುವುದು ಅನುಚಿತವಾಗುತ್ತದೆ ಎಂದು ಪ್ರಧಾನಿ ಇಂದಿರಾ ಗಾಂಧಿ ಅವರು ಇಂದು ಆಡಳಿತ ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯನಿರ್ವಾಹಕ ಸಮಿತಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>