<p><strong>ಸರ್ಕಾರಗಳನ್ನು ಉರುಳಿಸುವ ಆಟ ಸಾಕು– ಇಂದಿರಾಗೆ ಜಯಪ್ರಕಾಶ್ ಬುದ್ಧಿವಾದ<br />ಪಾಟಲೀಪುರ, ಜುಲೈ 7–</strong> ಸರ್ಕಾರಗಳನ್ನು ಉರುಳಿಸುವ ಆಟ ಇನ್ನು ಸಾಕು ಎಂದು ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರು ರಾಜಕಾರಣಿಗಳಿಗೆ ವಿಶೇಷವಾಗಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ಬುದ್ಧಿ ಹೇಳಿದ್ದಾರೆ.</p>.<p>ಮಂಗಳವಾರ ಇಲ್ಲಿ ಬಾಂಗ್ಲಾ ದೇಶ ಕುರಿತ ಎರಡು ದಿನಗಳ ಬಹಿರಂಗ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಅಸ್ಥಿರ ರಾಜಕೀಯ ಪರಿಸ್ಥಿತಿ ಬಾಂಗ್ಲಾ ದೇಶದ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಷ್ಟ್ರದ ಸಮಸ್ಯೆಗಳನ್ನು ಉಲ್ಬಣಗೊಳಿಸುವ ಸಂಭವವಿದೆಯೆಂದು ನುಡಿದರು.</p>.<p>‘ಸರ್ಕಾರಗಳನ್ನು ಉರುಳಿಸುವ ಆಟವನ್ನು ನಿಲ್ಲಿಸುವಂತೆ ನಾನು ಎಲ್ಲ ರಾಜಕೀಯ ಪಕ್ಷಗಳ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ತಿಳಿಸಿದರು.</p>.<p>‘ಶ್ರೀಮತಿ ಇಂದಿರಾ ಗಾಂಧಿಯವರು ಸಾಕಷ್ಟು ಸರ್ಕಾರಗಳನ್ನು ಉರುಳಿಸಿದ್ದಾರೆ. ಅಷ್ಟಕ್ಕೆ ಅವರು ತೃಪ್ತಿ ಪಟ್ಟುಕೊಳ್ಳಬೇಕು’ ಎಂದು ಜಯಪ್ರಕಾಶ್ ನಾರಾಯಣ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ಕಾರಗಳನ್ನು ಉರುಳಿಸುವ ಆಟ ಸಾಕು– ಇಂದಿರಾಗೆ ಜಯಪ್ರಕಾಶ್ ಬುದ್ಧಿವಾದ<br />ಪಾಟಲೀಪುರ, ಜುಲೈ 7–</strong> ಸರ್ಕಾರಗಳನ್ನು ಉರುಳಿಸುವ ಆಟ ಇನ್ನು ಸಾಕು ಎಂದು ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರು ರಾಜಕಾರಣಿಗಳಿಗೆ ವಿಶೇಷವಾಗಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ಬುದ್ಧಿ ಹೇಳಿದ್ದಾರೆ.</p>.<p>ಮಂಗಳವಾರ ಇಲ್ಲಿ ಬಾಂಗ್ಲಾ ದೇಶ ಕುರಿತ ಎರಡು ದಿನಗಳ ಬಹಿರಂಗ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಅಸ್ಥಿರ ರಾಜಕೀಯ ಪರಿಸ್ಥಿತಿ ಬಾಂಗ್ಲಾ ದೇಶದ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಷ್ಟ್ರದ ಸಮಸ್ಯೆಗಳನ್ನು ಉಲ್ಬಣಗೊಳಿಸುವ ಸಂಭವವಿದೆಯೆಂದು ನುಡಿದರು.</p>.<p>‘ಸರ್ಕಾರಗಳನ್ನು ಉರುಳಿಸುವ ಆಟವನ್ನು ನಿಲ್ಲಿಸುವಂತೆ ನಾನು ಎಲ್ಲ ರಾಜಕೀಯ ಪಕ್ಷಗಳ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ತಿಳಿಸಿದರು.</p>.<p>‘ಶ್ರೀಮತಿ ಇಂದಿರಾ ಗಾಂಧಿಯವರು ಸಾಕಷ್ಟು ಸರ್ಕಾರಗಳನ್ನು ಉರುಳಿಸಿದ್ದಾರೆ. ಅಷ್ಟಕ್ಕೆ ಅವರು ತೃಪ್ತಿ ಪಟ್ಟುಕೊಳ್ಳಬೇಕು’ ಎಂದು ಜಯಪ್ರಕಾಶ್ ನಾರಾಯಣ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>