ಇಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ‘ಕೆಲವು ವಿದೇಶ ಸರ್ಕಾರಗಳು ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಆದರೆ ಈಗ ಕಾಲ ಬದಲಾಗಿದೆ. ಈ ಹಸ್ತಕ್ಷೇಪವನ್ನು ಭಾರತ ಸಹಿಸುವುದಿಲ್ಲ’ ಎಂದರು. ವಿದೇಶಿ ನೆರವು ನಿಲ್ಲಿಸುವ ಬೆದರಿಕೆ ಭಾರತದ ಮೇಲೆ ಯಾವ ಪರಿಣಾಮವನ್ನೂ ಬೀರದು ಎಂದೂ ಅವರು ಸ್ಪಷ್ಟಪಡಿಸಿದರು.