<p>ಕೆಣಕಿದರೆ ಮಗ್ಗಲು ಮುರಿದೇವು: ಪಾಕ್ಗೆ ಇಂದಿರಾ ಎಚ್ಚರಿಕೆ</p>.<p>ರಾಣಿಖೇತ್, ಮೇ 18– ಪಾಕಿಸ್ತಾನ ಹಾಕುವ ಯಾವ ಬೆದರಿಕೆಗಳಿಗೂ ಭಾರತ ಹೆದರದು ಎಂದು ಇಲ್ಲಿ ಇಂದು ಘೋಷಿಸಿದ ಪ್ರಧಾನಿ ಇಂದಿರಾ ಗಾಂಧಿ ಅವರು, ‘ಅಂಥ ಪರಿಸ್ಥಿತಿಗೆ ನಮ್ಮನ್ನು ಬಲವಂತವಾಗಿ ಎಳೆದರೆ, ಹೋರಾಡಲು ನಾವು ಸಂಪೂರ್ಣ ಸನ್ನದ್ಧರಾಗಿದ್ದೇವೆ’ ಎಂದರು.</p>.<p>ಪೂರ್ವ ಬಂಗಾಳದಲ್ಲಿ ಎಲ್ಲವೂ ಚೆನ್ನಾಗಿದೆಯೆಂಬ ಪಾಕಿಸ್ತಾನದ ಹೇಳಿಕೆಗಳ ಸತ್ಯವನ್ನು ಅವರು ಪ್ರಶ್ನಿಸಿ, ಇದು ವಾಸ್ತವವೇ ಆಗಿದ್ದರೆ ಭಾರತಕ್ಕೆ ಧಾವಿಸುತ್ತಿರುವ ನಿರಾಶ್ರಿತರನ್ನು ತತ್ಕ್ಷಣವೇ ಪಾಕಿಸ್ತಾನ ವಾಪಸು ಕರೆಸಿಕೊಳ್ಳಬೇಕೆಂದರು.</p>.<p>ಕಂದಾಯ ಬಾಕಿ ವಸೂಲಿಯಲ್ಲಿ ಕಿರುಕುಳವಿಲ್ಲ: ರಾಜ್ಯಪಾಲರ ಭರವಸೆ</p>.<p>ಬೆಂಗಳೂರು, ಮೇ 18– ಭೂ ಕಂದಾಯ ಮತ್ತು ತಕರಾರು ತಖ್ತೆ ದಂಡ ವಸೂಲಿಯಲ್ಲಿ ‘ದುರ್ಬಲರಿಗೆ’ ಕಿರುಕುಳ ಕೊಡಬಾರದೆಂದು ಅಧಿಕಾರಿಗಳಿಗೆ ತಾವು ಸೂಚನೆ ನೀಡುವುದಾಗಿ ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ರಾಜ್ಯದ ಸಂಸತ್ ಸದಸ್ಯರಿಗೆ ಭರವಸೆ ನೀಡಿದರೆಂದು ತಿಳಿದುಬಂದಿದೆ.</p>.<p>ಇಂದು ಸಂಜೆ ಸಂಸತ್ ಸದಸ್ಯರನ್ನು ರಾಜ್ಯಪಾಲರು ಭೇಟಿ ಮಾಡಿದಾಗ, ಕಂದಾಯ ವಸೂಲಿ ಮಾಡುವುದರಲ್ಲಿ ಅಧಿಕಾರಿಗಳು ‘ಕಿರುಕುಳ’ ಕೊಡುತ್ತಿದ್ದಾರೆ ಎಂದು ಅನೇಕ ಸದಸ್ಯರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಣಕಿದರೆ ಮಗ್ಗಲು ಮುರಿದೇವು: ಪಾಕ್ಗೆ ಇಂದಿರಾ ಎಚ್ಚರಿಕೆ</p>.<p>ರಾಣಿಖೇತ್, ಮೇ 18– ಪಾಕಿಸ್ತಾನ ಹಾಕುವ ಯಾವ ಬೆದರಿಕೆಗಳಿಗೂ ಭಾರತ ಹೆದರದು ಎಂದು ಇಲ್ಲಿ ಇಂದು ಘೋಷಿಸಿದ ಪ್ರಧಾನಿ ಇಂದಿರಾ ಗಾಂಧಿ ಅವರು, ‘ಅಂಥ ಪರಿಸ್ಥಿತಿಗೆ ನಮ್ಮನ್ನು ಬಲವಂತವಾಗಿ ಎಳೆದರೆ, ಹೋರಾಡಲು ನಾವು ಸಂಪೂರ್ಣ ಸನ್ನದ್ಧರಾಗಿದ್ದೇವೆ’ ಎಂದರು.</p>.<p>ಪೂರ್ವ ಬಂಗಾಳದಲ್ಲಿ ಎಲ್ಲವೂ ಚೆನ್ನಾಗಿದೆಯೆಂಬ ಪಾಕಿಸ್ತಾನದ ಹೇಳಿಕೆಗಳ ಸತ್ಯವನ್ನು ಅವರು ಪ್ರಶ್ನಿಸಿ, ಇದು ವಾಸ್ತವವೇ ಆಗಿದ್ದರೆ ಭಾರತಕ್ಕೆ ಧಾವಿಸುತ್ತಿರುವ ನಿರಾಶ್ರಿತರನ್ನು ತತ್ಕ್ಷಣವೇ ಪಾಕಿಸ್ತಾನ ವಾಪಸು ಕರೆಸಿಕೊಳ್ಳಬೇಕೆಂದರು.</p>.<p>ಕಂದಾಯ ಬಾಕಿ ವಸೂಲಿಯಲ್ಲಿ ಕಿರುಕುಳವಿಲ್ಲ: ರಾಜ್ಯಪಾಲರ ಭರವಸೆ</p>.<p>ಬೆಂಗಳೂರು, ಮೇ 18– ಭೂ ಕಂದಾಯ ಮತ್ತು ತಕರಾರು ತಖ್ತೆ ದಂಡ ವಸೂಲಿಯಲ್ಲಿ ‘ದುರ್ಬಲರಿಗೆ’ ಕಿರುಕುಳ ಕೊಡಬಾರದೆಂದು ಅಧಿಕಾರಿಗಳಿಗೆ ತಾವು ಸೂಚನೆ ನೀಡುವುದಾಗಿ ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ರಾಜ್ಯದ ಸಂಸತ್ ಸದಸ್ಯರಿಗೆ ಭರವಸೆ ನೀಡಿದರೆಂದು ತಿಳಿದುಬಂದಿದೆ.</p>.<p>ಇಂದು ಸಂಜೆ ಸಂಸತ್ ಸದಸ್ಯರನ್ನು ರಾಜ್ಯಪಾಲರು ಭೇಟಿ ಮಾಡಿದಾಗ, ಕಂದಾಯ ವಸೂಲಿ ಮಾಡುವುದರಲ್ಲಿ ಅಧಿಕಾರಿಗಳು ‘ಕಿರುಕುಳ’ ಕೊಡುತ್ತಿದ್ದಾರೆ ಎಂದು ಅನೇಕ ಸದಸ್ಯರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>