<p>ಅಸ್ಪೃಶ್ಯತೆ ಅಪರಾಧಕ್ಕೆ ತೀವ್ರ ಶಿಕ್ಷೆಗೆ ಸಲಹೆ</p>.<p>ನವದೆಹಲಿ, ಮೇ 21– ಅಸ್ಪೃಶ್ಯತೆ ಮೊಕದ್ದಮೆಗಳಲ್ಲಿ ಶಿಕ್ಷೆ ಹೆಚ್ಚಿಸಬೇಕೆಂದು ಇಂದು ಇಲ್ಲಿ ಕೇಂದ್ರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಚಿವ ಸಿದ್ಧಾರ್ಥ ಶಂಕರರಾಯ್ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ರಾಜ್ಯಗಳ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವರ ಸಮ್ಮೇಳನವು ಅವಿರೋಧವಾಗಿ ಸರ್ಕಾರಕ್ಕೆ ಶಿಫಾರಸು ಮಾಡಿತು.</p>.<p>ಎಸಗಿದ ಅಪರಾಧಗಳ ಸಂಖ್ಯೆಯನ್ನು ಆಧರಿಸಿ ಕನಿಷ್ಠ ಮೂರು ತಿಂಗಳ ಸಜಾ ಜತೆಗೆ 50 ರೂಪಾಯಿಗಳ ದಂಡದಿಂದ ಆರಂಭಿಸಿ ಪರಮಾವಧಿಯಾಗಿ ಎರಡು ವರ್ಷಗಳ ಸಜಾ ಹಾಗೂ 1,000 ರೂಪಾಯಿ ದಂಡ ವಿಧಿಸಬೇಕೆಂದು ಸಮ್ಮೇಳನವು ಸಲಹೆ ಮಾಡಿತು.</p>.<p>ಖಜಾನೆ ಮೂಲಕ ನಗದು ಸಂಬಳ: ಯೋಜನೆ ನ್ಯೂನತೆ</p>.<p>ಬೆಂಗಳೂರು, ಮೇ 21– ಖಾಸಗಿ ಶಾಲೆಗಳ ಶಿಕ್ಷಕರಿಗೆ ಚೆಕ್ಗಳ ಬದಲು, ಖಜಾನೆ ಮೂಲಕ ನಗದು ರೂಪದಲ್ಲಿ ಸಂಬಳ ಕೊಡಲು ಸಾಧ್ಯವೇ ಎಂಬ ರಾಜ್ಯಪಾಲರ ಸೂಚನೆಯನ್ನು ಕಳೆದ ಎರಡು ದಿನಗಳಿಂದ ಪರಿಶೀಲಿಸುತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಸಲಹೆಯೂ ನ್ಯೂನತೆಯಿಂದ ಹೊರತಾಗಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಸ್ಪೃಶ್ಯತೆ ಅಪರಾಧಕ್ಕೆ ತೀವ್ರ ಶಿಕ್ಷೆಗೆ ಸಲಹೆ</p>.<p>ನವದೆಹಲಿ, ಮೇ 21– ಅಸ್ಪೃಶ್ಯತೆ ಮೊಕದ್ದಮೆಗಳಲ್ಲಿ ಶಿಕ್ಷೆ ಹೆಚ್ಚಿಸಬೇಕೆಂದು ಇಂದು ಇಲ್ಲಿ ಕೇಂದ್ರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಚಿವ ಸಿದ್ಧಾರ್ಥ ಶಂಕರರಾಯ್ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ರಾಜ್ಯಗಳ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವರ ಸಮ್ಮೇಳನವು ಅವಿರೋಧವಾಗಿ ಸರ್ಕಾರಕ್ಕೆ ಶಿಫಾರಸು ಮಾಡಿತು.</p>.<p>ಎಸಗಿದ ಅಪರಾಧಗಳ ಸಂಖ್ಯೆಯನ್ನು ಆಧರಿಸಿ ಕನಿಷ್ಠ ಮೂರು ತಿಂಗಳ ಸಜಾ ಜತೆಗೆ 50 ರೂಪಾಯಿಗಳ ದಂಡದಿಂದ ಆರಂಭಿಸಿ ಪರಮಾವಧಿಯಾಗಿ ಎರಡು ವರ್ಷಗಳ ಸಜಾ ಹಾಗೂ 1,000 ರೂಪಾಯಿ ದಂಡ ವಿಧಿಸಬೇಕೆಂದು ಸಮ್ಮೇಳನವು ಸಲಹೆ ಮಾಡಿತು.</p>.<p>ಖಜಾನೆ ಮೂಲಕ ನಗದು ಸಂಬಳ: ಯೋಜನೆ ನ್ಯೂನತೆ</p>.<p>ಬೆಂಗಳೂರು, ಮೇ 21– ಖಾಸಗಿ ಶಾಲೆಗಳ ಶಿಕ್ಷಕರಿಗೆ ಚೆಕ್ಗಳ ಬದಲು, ಖಜಾನೆ ಮೂಲಕ ನಗದು ರೂಪದಲ್ಲಿ ಸಂಬಳ ಕೊಡಲು ಸಾಧ್ಯವೇ ಎಂಬ ರಾಜ್ಯಪಾಲರ ಸೂಚನೆಯನ್ನು ಕಳೆದ ಎರಡು ದಿನಗಳಿಂದ ಪರಿಶೀಲಿಸುತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಸಲಹೆಯೂ ನ್ಯೂನತೆಯಿಂದ ಹೊರತಾಗಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>