<p><strong>ಸಂಸ್ಥಾ ಕಾಂಗ್ರೆಸ್, ಜನಸಂಘ, ಸಂಯುಕ್ತ ಸೋಷಲಿಸ್ಟ್ ಪಕ್ಷ ಸೇರಿ ಹೊಸ ರಂಗ ರಚನೆ</strong></p>.<p><strong>ನವದೆಹಲಿ, ಜ. 3– </strong>ಲೋಕಸಭೆಗೆ ನಡೆಯುವ ಮಧ್ಯಂತರ ಚುನಾವಣೆಯಲ್ಲಿ ಆಡಳಿತ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಉದ್ದೇಶದಿಂದ ಸ್ವತಂತ್ರ ಪಕ್ಷವನ್ನು ಬಿಟ್ಟು ಸಂಸ್ಥಾ ಕಾಂಗ್ರೆಸ್, ಜನಸಂಘ ಮತ್ತು ಸಂಯುಕ್ತ ಸೋಷಲಿಸ್ಟ್ ಪಕ್ಷಗಳು ಹೊಸ ರಂಗ ರಚಿಸಿಕೊಂಡಿರುವುದನ್ನು ಈ ರಾತ್ರಿ ಇಲ್ಲಿ ಪ್ರಕಟಿಸಿದವು.</p>.<p>ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್.ನಿಜಲಿಂಗಪ್ಪ, ಜನಸಂಘದ ಅಧ್ಯಕ್ಷ ಶ್ರೀ ಎ.ಬಿ.ವಾಜಪೇಯಿ, ಸಂಯುಕ್ತ ಸೋಷಲಿಸ್ಟ್ ಕೇಂದ್ರ ಸಂಸದೀಯ ಮಂಡಳಿಯ ಅಧ್ಯಕ್ಷ ಶ್ರೀ ರಾಮಸೇವಕ ಯಾದವ್ ಮತ್ತು ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ಅವರು ಸಹಿ ಹಾಕಿ ಈ ಹೇಳಿಕೆ ನೀಡಿದ್ದಾರೆ.</p>.<p><strong>ಶ್ರೀಸಾಮಾನ್ಯರ ಹಿತಕ್ಕೆ ಶ್ರಮಿಸಲು ವಿಜ್ಞಾನಿಗಳಿಗೆ ಪ್ರಧಾನಿ ಕರೆ</strong></p>.<p><strong>ಬೆಂಗಳೂರು, ಜ. 3–</strong> ತಮ್ಮ ಸಂಸ್ಥೆ ಹಾಗೂ ಸಂಶೋಧನೆಗಳ ಸೀಮಿತ ಸ್ಥಾನ ಬಿಟ್ಟು,ಶ್ರೀಸಾಮಾನ್ಯರ ಹಿತ ವರ್ಧಿಸುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಇಳಿದು, ಸಮಾಜದ ಅವಿಭಾಜ್ಯ ಅಂಗವಾಗಿ ಕಾರ್ಯೋನ್ಮುಖರಾಗಬೇಕು ಎಂದು ಪ್ರಧಾನ ಮಂತ್ರಿ ಇಂದಿರಾ ಗಾಂಧಿ ವಿಜ್ಞಾನಿಗಳಿಗೆ ಕರೆ ನೀಡಿದ್ದಾರೆ.</p>.<p>ಸೆಂಟ್ರಲ್ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ‘ರಾಮನ್ ಮಂಟಪ’ದಲ್ಲಿ ಆರಂಭವಾದ ‘ಭಾರತೀಯ ವಿಜ್ಞಾನ ಕಾಂಗ್ರೆಸ್’ನ 58ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಸ್ಥಾ ಕಾಂಗ್ರೆಸ್, ಜನಸಂಘ, ಸಂಯುಕ್ತ ಸೋಷಲಿಸ್ಟ್ ಪಕ್ಷ ಸೇರಿ ಹೊಸ ರಂಗ ರಚನೆ</strong></p>.<p><strong>ನವದೆಹಲಿ, ಜ. 3– </strong>ಲೋಕಸಭೆಗೆ ನಡೆಯುವ ಮಧ್ಯಂತರ ಚುನಾವಣೆಯಲ್ಲಿ ಆಡಳಿತ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಉದ್ದೇಶದಿಂದ ಸ್ವತಂತ್ರ ಪಕ್ಷವನ್ನು ಬಿಟ್ಟು ಸಂಸ್ಥಾ ಕಾಂಗ್ರೆಸ್, ಜನಸಂಘ ಮತ್ತು ಸಂಯುಕ್ತ ಸೋಷಲಿಸ್ಟ್ ಪಕ್ಷಗಳು ಹೊಸ ರಂಗ ರಚಿಸಿಕೊಂಡಿರುವುದನ್ನು ಈ ರಾತ್ರಿ ಇಲ್ಲಿ ಪ್ರಕಟಿಸಿದವು.</p>.<p>ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್.ನಿಜಲಿಂಗಪ್ಪ, ಜನಸಂಘದ ಅಧ್ಯಕ್ಷ ಶ್ರೀ ಎ.ಬಿ.ವಾಜಪೇಯಿ, ಸಂಯುಕ್ತ ಸೋಷಲಿಸ್ಟ್ ಕೇಂದ್ರ ಸಂಸದೀಯ ಮಂಡಳಿಯ ಅಧ್ಯಕ್ಷ ಶ್ರೀ ರಾಮಸೇವಕ ಯಾದವ್ ಮತ್ತು ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ಅವರು ಸಹಿ ಹಾಕಿ ಈ ಹೇಳಿಕೆ ನೀಡಿದ್ದಾರೆ.</p>.<p><strong>ಶ್ರೀಸಾಮಾನ್ಯರ ಹಿತಕ್ಕೆ ಶ್ರಮಿಸಲು ವಿಜ್ಞಾನಿಗಳಿಗೆ ಪ್ರಧಾನಿ ಕರೆ</strong></p>.<p><strong>ಬೆಂಗಳೂರು, ಜ. 3–</strong> ತಮ್ಮ ಸಂಸ್ಥೆ ಹಾಗೂ ಸಂಶೋಧನೆಗಳ ಸೀಮಿತ ಸ್ಥಾನ ಬಿಟ್ಟು,ಶ್ರೀಸಾಮಾನ್ಯರ ಹಿತ ವರ್ಧಿಸುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಇಳಿದು, ಸಮಾಜದ ಅವಿಭಾಜ್ಯ ಅಂಗವಾಗಿ ಕಾರ್ಯೋನ್ಮುಖರಾಗಬೇಕು ಎಂದು ಪ್ರಧಾನ ಮಂತ್ರಿ ಇಂದಿರಾ ಗಾಂಧಿ ವಿಜ್ಞಾನಿಗಳಿಗೆ ಕರೆ ನೀಡಿದ್ದಾರೆ.</p>.<p>ಸೆಂಟ್ರಲ್ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ‘ರಾಮನ್ ಮಂಟಪ’ದಲ್ಲಿ ಆರಂಭವಾದ ‘ಭಾರತೀಯ ವಿಜ್ಞಾನ ಕಾಂಗ್ರೆಸ್’ನ 58ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>