<p><strong>ಒತ್ತಾಯಕ್ಕೆ ಮಣಿದು ಮುಖ್ಯಮಂತ್ರಿಗಳ ಬದಲಾವಣೆ ಅಸಾಧ್ಯ</strong></p><p><strong>ರಾಯಪುರ, ಸೆ. 8–</strong> ಭಿನ್ನಮತೀಯರ ಒತ್ತಾಯಕ್ಕೆ ಮಣಿದು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಾ ಹೋಗಲು ಸಾಧ್ಯವಿಲ್ಲ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಚಂದ್ರಜಿತ್ ಯಾದವ್ ಸ್ಪಷ್ಟಪಡಿಸಿದರು.</p><p>ಕಾಂಗ್ರೆಸ್ಸನ್ನು ಬಿಟ್ಟುಹೋಗಿರುವ ವ್ಯಕ್ತಿಗಳನ್ನು ಪ್ರದೇಶ ಕಾಂಗ್ರೆಸ್ ಸಮಿತಿಗಳು ಪರೀಕ್ಷಿಸಿ ಶಿಫಾರಸು ಮಾಡಿದ ನಂತರ ಅಂತಹವರನ್ನು ವೈಯಕ್ತಿಕವಾಗಿ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲಿಸಬಹುದು. ಆದರೆ ಮೂಲಭೂತ ನೀತಿಗಳ ಮೇಲಿನ ಭಿನ್ನಾಭಿಪ್ರಾಯದಿಂದ ಪಕ್ಷ ಬಿಟ್ಟು ಹೋಗಿರುವವರನ್ನು ಸೇರಿಸಿಕೊಳ್ಳಲಾಗದು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.</p><p><strong>ಸರ್ಕಾರಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ: ಕೇಂದ್ರದ ಸುತ್ತೋಲೆ</strong></p><p><strong>ಬೆಂಗಳೂರು, ಸೆ. 8–</strong> ರಾಜ್ಯದಲ್ಲಿರುವ ಸರ್ಕಾರಿ ಕ್ಷೇತ್ರದ ಕೈಗಾರಿಕೆಗಳಲ್ಲಿ ಮಾಸಿಕ 500 ರೂ.ವರೆಗೆ ವೇತನ ಪಡೆಯುವ ಹುದ್ದೆಗಳಿಗೆ ಸ್ಥಳೀಯರನ್ನೇ ನೇಮಕ ಮಾಡಬೇಕೆಂಬ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಕಳುಹಿಸಿದೆ ಎಂದು ಕೈಗಾರಿಕೆ ಸಚಿವ ಎಸ್.ಎಂ.ಕೃಷ್ಣ ವಿಧಾನಸಭೆಯಲ್ಲಿ ತಿಳಿಸಿದರು.</p><p>ರಾಜ್ಯದಲ್ಲಿರುವ ಖಾಸಗಿ ಅಥವಾ ಸರ್ಕಾರಿ ಕೈಗಾರಿಕೆಗಳಲ್ಲಿ ಕನಿಷ್ಠ ಶೇಕಡ 80ರಷ್ಟು ಹುದ್ದೆಗಳನ್ನು ಮೈಸೂರಿನವರಿಗೆ ಮೀಸಲಿಡುವಂತೆ ಶಾಸನ ರಚಿಸಬೇಕೆಂಬ ಕೆ.ಶ್ರೀರಾಮುಲು ಅವರ ಖಾಸಗಿ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು ‘ಈ ಪ್ರಶ್ನೆಯನ್ನು ಸಂವಿಧಾನಕ್ಕೆ ಅನುಗುಣವಾಗಿ ಪರಿಶೀಲಿಸಬೇಕಾಗಿದೆ’ ಎಂಬುದನ್ನು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒತ್ತಾಯಕ್ಕೆ ಮಣಿದು ಮುಖ್ಯಮಂತ್ರಿಗಳ ಬದಲಾವಣೆ ಅಸಾಧ್ಯ</strong></p><p><strong>ರಾಯಪುರ, ಸೆ. 8–</strong> ಭಿನ್ನಮತೀಯರ ಒತ್ತಾಯಕ್ಕೆ ಮಣಿದು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಾ ಹೋಗಲು ಸಾಧ್ಯವಿಲ್ಲ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಚಂದ್ರಜಿತ್ ಯಾದವ್ ಸ್ಪಷ್ಟಪಡಿಸಿದರು.</p><p>ಕಾಂಗ್ರೆಸ್ಸನ್ನು ಬಿಟ್ಟುಹೋಗಿರುವ ವ್ಯಕ್ತಿಗಳನ್ನು ಪ್ರದೇಶ ಕಾಂಗ್ರೆಸ್ ಸಮಿತಿಗಳು ಪರೀಕ್ಷಿಸಿ ಶಿಫಾರಸು ಮಾಡಿದ ನಂತರ ಅಂತಹವರನ್ನು ವೈಯಕ್ತಿಕವಾಗಿ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲಿಸಬಹುದು. ಆದರೆ ಮೂಲಭೂತ ನೀತಿಗಳ ಮೇಲಿನ ಭಿನ್ನಾಭಿಪ್ರಾಯದಿಂದ ಪಕ್ಷ ಬಿಟ್ಟು ಹೋಗಿರುವವರನ್ನು ಸೇರಿಸಿಕೊಳ್ಳಲಾಗದು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.</p><p><strong>ಸರ್ಕಾರಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ: ಕೇಂದ್ರದ ಸುತ್ತೋಲೆ</strong></p><p><strong>ಬೆಂಗಳೂರು, ಸೆ. 8–</strong> ರಾಜ್ಯದಲ್ಲಿರುವ ಸರ್ಕಾರಿ ಕ್ಷೇತ್ರದ ಕೈಗಾರಿಕೆಗಳಲ್ಲಿ ಮಾಸಿಕ 500 ರೂ.ವರೆಗೆ ವೇತನ ಪಡೆಯುವ ಹುದ್ದೆಗಳಿಗೆ ಸ್ಥಳೀಯರನ್ನೇ ನೇಮಕ ಮಾಡಬೇಕೆಂಬ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಕಳುಹಿಸಿದೆ ಎಂದು ಕೈಗಾರಿಕೆ ಸಚಿವ ಎಸ್.ಎಂ.ಕೃಷ್ಣ ವಿಧಾನಸಭೆಯಲ್ಲಿ ತಿಳಿಸಿದರು.</p><p>ರಾಜ್ಯದಲ್ಲಿರುವ ಖಾಸಗಿ ಅಥವಾ ಸರ್ಕಾರಿ ಕೈಗಾರಿಕೆಗಳಲ್ಲಿ ಕನಿಷ್ಠ ಶೇಕಡ 80ರಷ್ಟು ಹುದ್ದೆಗಳನ್ನು ಮೈಸೂರಿನವರಿಗೆ ಮೀಸಲಿಡುವಂತೆ ಶಾಸನ ರಚಿಸಬೇಕೆಂಬ ಕೆ.ಶ್ರೀರಾಮುಲು ಅವರ ಖಾಸಗಿ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು ‘ಈ ಪ್ರಶ್ನೆಯನ್ನು ಸಂವಿಧಾನಕ್ಕೆ ಅನುಗುಣವಾಗಿ ಪರಿಶೀಲಿಸಬೇಕಾಗಿದೆ’ ಎಂಬುದನ್ನು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>