<p><strong>ಕಲ್ಕತ್ತ: 90 ಮಂದಿ ಬಂಧನ</strong></p>.<p>ಕಲ್ಕತ್ತ, ಸೆಪ್ಟೆಂಬರ್ 12– ಮುಂಬಯಿಯಲ್ಲಿ ನಡೆಯುತ್ತಿರುವ ಹತ್ತಿ ಗಿರಣಿ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರೆ ನೀಡಿದ್ದ ಒಂದು ದಿನದ ಬಂದ್ನಲ್ಲಿ ಪಾಲ್ಗೊಂಡಿದ್ದ 90 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈ ಬಂದ್ ಕಲ್ಕತ್ತ ನಗರ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಸ್ಗಳ ಸಂಚಾರ ಎಂದಿನಂತಿತ್ತು. ಕಾರ್ಖಾನೆಗಳ ಚಟುವಟಿಕೆಗೆ ಯಾವುದೇ ಅಡ್ಡಿಯಾಗಲಿಲ್ಲ. ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಾಮಾನ್ಯವಾಗಿತ್ತು.</p>.<p>ಆದರೂ, ಕಲ್ಕತ್ತಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಎರಡು ರೈಲುಗಳ ಸಂಚಾರಕ್ಕೆ ಭಾಗಶಃ ಅಡ್ಡಿಯಾಯಿತು. ಹೌರ ಭಾಗದ ಕೆಲವು ಕಾರ್ಖಾನೆಗಳ ಚಟುವಟಿಕೆಗೆ ಅಡಚಣೆಯಾದ ಬಗ್ಗೆ ವರದಿಯಾಗಿದೆ.</p>.<p><strong>ಪರಿಶಿಷ್ಟರಿಗೆ ವಿದ್ಯಾರ್ಥಿವೇತನ ಹೆಚ್ಚಳ</strong></p>.<p>ನವದೆಹಲಿ, ಸೆಪ್ಟೆಂಬರ್ 12– ಪರಿಶಿಷ್ಟ ಜಾತಿ ಮತ್ತು ಪಂಗಡ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹೆಚ್ಚುವರಿ ಎರಡು ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಆಯ್ಕೆ ಸಮಿತಿಯ ಶಿಫಾರಸು ಅನ್ವಯ ಈ ಹೆಚ್ಚುವರಿ ಅನುದಾನ ನೀಡಲು ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲ್ಕತ್ತ: 90 ಮಂದಿ ಬಂಧನ</strong></p>.<p>ಕಲ್ಕತ್ತ, ಸೆಪ್ಟೆಂಬರ್ 12– ಮುಂಬಯಿಯಲ್ಲಿ ನಡೆಯುತ್ತಿರುವ ಹತ್ತಿ ಗಿರಣಿ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರೆ ನೀಡಿದ್ದ ಒಂದು ದಿನದ ಬಂದ್ನಲ್ಲಿ ಪಾಲ್ಗೊಂಡಿದ್ದ 90 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈ ಬಂದ್ ಕಲ್ಕತ್ತ ನಗರ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಸ್ಗಳ ಸಂಚಾರ ಎಂದಿನಂತಿತ್ತು. ಕಾರ್ಖಾನೆಗಳ ಚಟುವಟಿಕೆಗೆ ಯಾವುದೇ ಅಡ್ಡಿಯಾಗಲಿಲ್ಲ. ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಾಮಾನ್ಯವಾಗಿತ್ತು.</p>.<p>ಆದರೂ, ಕಲ್ಕತ್ತಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಎರಡು ರೈಲುಗಳ ಸಂಚಾರಕ್ಕೆ ಭಾಗಶಃ ಅಡ್ಡಿಯಾಯಿತು. ಹೌರ ಭಾಗದ ಕೆಲವು ಕಾರ್ಖಾನೆಗಳ ಚಟುವಟಿಕೆಗೆ ಅಡಚಣೆಯಾದ ಬಗ್ಗೆ ವರದಿಯಾಗಿದೆ.</p>.<p><strong>ಪರಿಶಿಷ್ಟರಿಗೆ ವಿದ್ಯಾರ್ಥಿವೇತನ ಹೆಚ್ಚಳ</strong></p>.<p>ನವದೆಹಲಿ, ಸೆಪ್ಟೆಂಬರ್ 12– ಪರಿಶಿಷ್ಟ ಜಾತಿ ಮತ್ತು ಪಂಗಡ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹೆಚ್ಚುವರಿ ಎರಡು ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಆಯ್ಕೆ ಸಮಿತಿಯ ಶಿಫಾರಸು ಅನ್ವಯ ಈ ಹೆಚ್ಚುವರಿ ಅನುದಾನ ನೀಡಲು ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>