ಬೆಂಗಳೂರು, ಜೂನ್ 18– ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗೆ ಮತ ಚಲಾಯಿಸಿದ ಆಪಾದನೆ ಮೇಲೆ ಕೆಲವು ಶಾಸಕರನ್ನು ಶಾಸಕಾಂಗ ಪಕ್ಷದಿಂದ ಅಮಾನತುಗೊಳಿಸಿರುವುದನ್ನು, ನಾಳೆ ನಗರಕ್ಕೆ ಆಗಮಿಸಲಿರುವ ಜನತಾದಳದ ರಾಷ್ಟ್ರೀಯ ಅಧ್ಯಕ್ಷಎಸ್.ಆರ್. ಬೊಮ್ಮಾಯಿ ಅವರು ತೆರವು ಮಾಡಲಿದ್ದಾರೆ ಎಂಬ ಸಂಗತಿ ಪಕ್ಷದ ರಾಜ್ಯ ಘಟಕದ ನಾಯಕರಲ್ಲಿ ಇರಿಸು ಮುರಿಸು ಉಂಟು ಮಾಡಿದೆ.