<p><strong>ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಮತದಾನ ಶಾಂತಿಯುತ </strong></p>.<p><strong>ನವದೆಹಲಿ, ನ. 12 (ಪಿಟಿಐ, ಯುಎನ್ಐ)</strong>– ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ಮಧ್ಯೆ ನಡೆದ ಘರ್ಷಣೆಯಲ್ಲಿ 10 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡ ಘಟನೆ ಹೊರತುಪಡಿಸಿದರೆ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಷ್ಟ್ರಾದ್ಯಂತ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು.</p>.<p>ಮತದಾನದ ಸಂದರ್ಭದಲ್ಲಿ ಜಿತೇಂದ್ರ ಪ್ರಸಾದರ ಬೆಂಬಲಿಗರೆಂದು ಶಂಕಿಸಲಾದ ಕೆಲವರು ಲಖನೌದ ನೆಹರೂ ಭವನದಲ್ಲಿರುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದರು.</p><p>_____________________</p>.<p><strong>ಅಡ್ವಾಣಿ ರಾಜೀನಾಮೆ ಪ್ರಶ್ನೆ: ಸಮಯ ಬಂದಾಗ ಪರಿಶೀಲನೆ</strong></p>.<p><strong>ನವದೆಹಲಿ, ನ. 12 (ಪಿಟಿಐ)–</strong> ಬಾಬರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಲ್.ಕೆ. ಅಡ್ವಾಣಿ ಮತ್ತು ಇತರ ಇಬ್ಬರು ಸಚಿವರ ವಿರುದ್ಧ ಆರೋಪ ಪಟ್ಟಿ ಹೊರಿಸಿದಾಗ ಖಂಡಿತವಾಗಿಯು ಆ ವೇಳೆಯಲ್ಲಿ ಅದನ್ನು ಪರಿಶೀಲಿಸಲಾಗುವುದು ಎಂಬುದಾಗಿ ಬಿಜೆಪಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಇಂದು ಇಲ್ಲಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಮತದಾನ ಶಾಂತಿಯುತ </strong></p>.<p><strong>ನವದೆಹಲಿ, ನ. 12 (ಪಿಟಿಐ, ಯುಎನ್ಐ)</strong>– ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ಮಧ್ಯೆ ನಡೆದ ಘರ್ಷಣೆಯಲ್ಲಿ 10 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡ ಘಟನೆ ಹೊರತುಪಡಿಸಿದರೆ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಷ್ಟ್ರಾದ್ಯಂತ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು.</p>.<p>ಮತದಾನದ ಸಂದರ್ಭದಲ್ಲಿ ಜಿತೇಂದ್ರ ಪ್ರಸಾದರ ಬೆಂಬಲಿಗರೆಂದು ಶಂಕಿಸಲಾದ ಕೆಲವರು ಲಖನೌದ ನೆಹರೂ ಭವನದಲ್ಲಿರುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದರು.</p><p>_____________________</p>.<p><strong>ಅಡ್ವಾಣಿ ರಾಜೀನಾಮೆ ಪ್ರಶ್ನೆ: ಸಮಯ ಬಂದಾಗ ಪರಿಶೀಲನೆ</strong></p>.<p><strong>ನವದೆಹಲಿ, ನ. 12 (ಪಿಟಿಐ)–</strong> ಬಾಬರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಲ್.ಕೆ. ಅಡ್ವಾಣಿ ಮತ್ತು ಇತರ ಇಬ್ಬರು ಸಚಿವರ ವಿರುದ್ಧ ಆರೋಪ ಪಟ್ಟಿ ಹೊರಿಸಿದಾಗ ಖಂಡಿತವಾಗಿಯು ಆ ವೇಳೆಯಲ್ಲಿ ಅದನ್ನು ಪರಿಶೀಲಿಸಲಾಗುವುದು ಎಂಬುದಾಗಿ ಬಿಜೆಪಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಇಂದು ಇಲ್ಲಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>