<p><strong>25 ವರ್ಷಗಳ ಹಿಂದೆ; ಬುಧವಾರ, 21–2–2001</strong></p>.<p><strong>ಅನುದಾನ ಕಡಿತ: ‘ಶಿಕ್ಷಕರ ಚಳವಳಿ ಎದುರಿಸಲು ಸರ್ಕಾರ ಸಿದ್ಧ’</strong></p>.<p>ಬೆಂಗಳೂರು, ಫೆ. 20– ಉನ್ನತ ಶಿಕ್ಷಣದ ಅನುದಾನಿತ ಖಾಸಗಿ ಕಾಲೇಜುಗಳ ಅನುದಾನದಲ್ಲಿ ಶೇ 15ರಷ್ಟು ಕಡಿತ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ಅಂತಿಮವಾಗಿದ್ದು, ಅದನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ ಇಂದು ಇಲ್ಲಿ ಹೇಳಿದರು.</p>.<p>ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ ಕೊಡುವ ದೃಷ್ಟಿಯಿಂದ ಉನ್ನತ ಶಿಕ್ಷಣಕ್ಕೆ ವೆಚ್ಚ ಮಾಡುವ ಹಣದಲ್ಲಿ ಕಡಿತ ಮಾಡುವ ಮೊದಲ ಹೆಜ್ಜೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆಯೆಂದು ಮುಖ್ಯಮಂತ್ರಿ ಅವರು ಈಗಾಗಲೇ ಹೇಳಿದ್ದಾರೆ ಎಂದು ತಮ್ಮನ್ನು ಭೇಟಿ ಮಾಡಿದ ವರದಿಗಾರರಿಗೆ ತಿಳಿಸಿದರು.</p>.<p><strong>ಇಂದ್ರಜಿತ್ ಗುಪ್ತಾ ನಿಧನ</strong></p>.<p>ಕೋಲ್ಕತ್ತ, ಫೆ. 20 (ಪಿಟಿಐ, ಯುಎನ್ಐ)– ಹಿರಿಯ ಕಮ್ಯೂನಿಸ್ಟ್ ನಾಯಕ, ಸಂಸತ್ತಿನ ಪಿತಾಮಹ ಎಂದೇ ಹೆಸರಾಗಿದ್ದ ಇಂದ್ರಜಿತ್ ಗುಪ್ತಾ (82) ಅವರು ಇಂದು ಬೆಳಗಿನಜಾವ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರು ಪತ್ನಿ ಸುರೈಯಾ, ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ಒಂದು ವರ್ಷದಿಂದ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕಳೆದ ಜ. 17ರಂದು ಅವರನ್ನು ಇಲ್ಲಿಗೆ ಕರೆತರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>25 ವರ್ಷಗಳ ಹಿಂದೆ; ಬುಧವಾರ, 21–2–2001</strong></p>.<p><strong>ಅನುದಾನ ಕಡಿತ: ‘ಶಿಕ್ಷಕರ ಚಳವಳಿ ಎದುರಿಸಲು ಸರ್ಕಾರ ಸಿದ್ಧ’</strong></p>.<p>ಬೆಂಗಳೂರು, ಫೆ. 20– ಉನ್ನತ ಶಿಕ್ಷಣದ ಅನುದಾನಿತ ಖಾಸಗಿ ಕಾಲೇಜುಗಳ ಅನುದಾನದಲ್ಲಿ ಶೇ 15ರಷ್ಟು ಕಡಿತ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ಅಂತಿಮವಾಗಿದ್ದು, ಅದನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ ಇಂದು ಇಲ್ಲಿ ಹೇಳಿದರು.</p>.<p>ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ ಕೊಡುವ ದೃಷ್ಟಿಯಿಂದ ಉನ್ನತ ಶಿಕ್ಷಣಕ್ಕೆ ವೆಚ್ಚ ಮಾಡುವ ಹಣದಲ್ಲಿ ಕಡಿತ ಮಾಡುವ ಮೊದಲ ಹೆಜ್ಜೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆಯೆಂದು ಮುಖ್ಯಮಂತ್ರಿ ಅವರು ಈಗಾಗಲೇ ಹೇಳಿದ್ದಾರೆ ಎಂದು ತಮ್ಮನ್ನು ಭೇಟಿ ಮಾಡಿದ ವರದಿಗಾರರಿಗೆ ತಿಳಿಸಿದರು.</p>.<p><strong>ಇಂದ್ರಜಿತ್ ಗುಪ್ತಾ ನಿಧನ</strong></p>.<p>ಕೋಲ್ಕತ್ತ, ಫೆ. 20 (ಪಿಟಿಐ, ಯುಎನ್ಐ)– ಹಿರಿಯ ಕಮ್ಯೂನಿಸ್ಟ್ ನಾಯಕ, ಸಂಸತ್ತಿನ ಪಿತಾಮಹ ಎಂದೇ ಹೆಸರಾಗಿದ್ದ ಇಂದ್ರಜಿತ್ ಗುಪ್ತಾ (82) ಅವರು ಇಂದು ಬೆಳಗಿನಜಾವ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರು ಪತ್ನಿ ಸುರೈಯಾ, ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ಒಂದು ವರ್ಷದಿಂದ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕಳೆದ ಜ. 17ರಂದು ಅವರನ್ನು ಇಲ್ಲಿಗೆ ಕರೆತರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>