ನವದೆಹಲಿ, ನ. 28– ರಾಷ್ಟ್ರದಲ್ಲಿ ಮುಂದೆ ಖಾಸಗಿ ಕಂಪೆನಿಗಳು ಸ್ಥಾಪಿಸಲಿರುವ ಯಾವುದೇ ವಿದ್ಯುತ್ ಯೋಜನೆಗಳಿಗೆ ಸರ್ಕಾರ ಪ್ರತಿ ಗ್ಯಾರಂಟಿ ನೀಡುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಪ್ರಕಟಿಸಿದ ಪ್ರಧಾನಿ ಎಚ್.ಡಿ.ದೇವೇಗೌಡರು, ವಿರೋಧ ಪಕ್ಷಗಳು ಅರ್ಥವಿಲ್ಲದ ತಕರಾರು ಅರ್ಜಿಗಳನ್ನು ಸಲ್ಲಿಸಿರುವುದರಿಂದ ಈ ವಲಯದಲ್ಲಿ ಬಂಡವಾಳ ಹೂಡಿಕೆ ಕಡಿಮೆಯಾಗಲು ಕಾರಣವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.