<p><strong>ಪುರಸಭೆ, ನಗರಸಭೆ, ಪಾಲಿಕೆಗಳಿಗೆ ಏಕಕಾಲಕ್ಕೆ ಚುನಾವಣೆ ಪರಿಶೀಲನೆ</strong></p>.<p><strong>ಬೆಂಗಳೂರು, ನ. 13–</strong> ರಾಜ್ಯದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳಿಗೆ <br>ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.</p>.<p>ಪ್ರಶ್ನೋತ್ತರ ವೇಳೆಯಲ್ಲಿ ರಾಮಚಂದ್ರ ಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ, ವಿರೋಧ ಪಕ್ಷಗಳ ಸದಸ್ಯರು ಈ ಸಂಬಂಧ ಮಾಡಿದ ಸಲಹೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದರು.</p>.<p><strong>_______________</strong></p><p><strong>ಸಂಕಷ್ಟದಲ್ಲಿರುವ ರೈತರಿಗಾಗಿ 100 ಕೋಟಿ ಆವರ್ತ ನಿಧಿ</strong></p>.<p><strong>ಬೆಂಗಳೂರು, ನ. 13</strong>– ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿದು ಸಂಕಷ್ಟ ಸ್ಥಿತಿಯನ್ನು ಎದುರಿಸುತ್ತಿರುವ ರೈತನ ನೆರವಿಗೆ ಧಾವಿಸಲು ರಾಜ್ಯ ಸರ್ಕಾರವು 100 ಕೋಟಿ ರೂಪಾಯಿಗಳ ಆವರ್ತ ನಿಧಿಯನ್ನು ಸ್ಥಾಪಿಸಲು ಇಂದು ನಿರ್ಧರಿಸಿದೆ.</p>.<p>ಬೆಳಿಗ್ಗೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಆದ ಕಾರಣ– ಪರಿಣಾಮ ಕುರಿತು ಸುದೀರ್ಘ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಸಭೆ, ನಗರಸಭೆ, ಪಾಲಿಕೆಗಳಿಗೆ ಏಕಕಾಲಕ್ಕೆ ಚುನಾವಣೆ ಪರಿಶೀಲನೆ</strong></p>.<p><strong>ಬೆಂಗಳೂರು, ನ. 13–</strong> ರಾಜ್ಯದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳಿಗೆ <br>ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.</p>.<p>ಪ್ರಶ್ನೋತ್ತರ ವೇಳೆಯಲ್ಲಿ ರಾಮಚಂದ್ರ ಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ, ವಿರೋಧ ಪಕ್ಷಗಳ ಸದಸ್ಯರು ಈ ಸಂಬಂಧ ಮಾಡಿದ ಸಲಹೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದರು.</p>.<p><strong>_______________</strong></p><p><strong>ಸಂಕಷ್ಟದಲ್ಲಿರುವ ರೈತರಿಗಾಗಿ 100 ಕೋಟಿ ಆವರ್ತ ನಿಧಿ</strong></p>.<p><strong>ಬೆಂಗಳೂರು, ನ. 13</strong>– ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿದು ಸಂಕಷ್ಟ ಸ್ಥಿತಿಯನ್ನು ಎದುರಿಸುತ್ತಿರುವ ರೈತನ ನೆರವಿಗೆ ಧಾವಿಸಲು ರಾಜ್ಯ ಸರ್ಕಾರವು 100 ಕೋಟಿ ರೂಪಾಯಿಗಳ ಆವರ್ತ ನಿಧಿಯನ್ನು ಸ್ಥಾಪಿಸಲು ಇಂದು ನಿರ್ಧರಿಸಿದೆ.</p>.<p>ಬೆಳಿಗ್ಗೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಆದ ಕಾರಣ– ಪರಿಣಾಮ ಕುರಿತು ಸುದೀರ್ಘ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>