<p><strong>ಹೈದರಾಬಾದಿನಲ್ಲಿ ಐದು ಕಡೆ ಗೋಲಿಬಾರ್: ಇಬ್ಬರ ಸಾವು</strong></p>.<p><strong>ಹೈದರಾಬಾದ್, ಜುಲೈ 7– </strong>ತೆಲಂಗಾಣ ಚಳವಳಿಕಾರರ ಹಿಂಸಾತ್ಮಕ ಕೃತ್ಯಗಳ ಕಾರಣ ಪೊಲೀಸರು ಇಂದು ಹೈದರಾಬಾದ್ ನಗರ ಮತ್ತು ಅದರ ಹೊರವಲಯಗಳಲ್ಲಿ ಐದು ಕಡೆ ಗೋಲಿಬಾರ್ ಮಾಡಿದ ಪರಿಣಾಮ ಇಬ್ಬರು ಸತ್ತು ಹಲವರು ಗಾಯಗೊಂಡರು.</p>.<p><strong>ಅಸ್ಪೃಶ್ಯರಿಗೆ ಸಂಖ್ಯೆ ಆಧಾರಪ್ರಾತಿನಿಧ್ಯಕ್ಕೆ ಸಮ್ಮೇಳನದಲ್ಲಿ ಒತ್ತಾಯ</strong></p>.<p><strong>ಬೆಂಗಳೂರು, ಜುಲೈ 7– </strong>ರಾಜಕೀಯ ಅಧಿಕಾರ ಮತ್ತು ಆಡಳಿತ ವ್ಯವಹಾರಗಳಲ್ಲಿ ಜನಸಂಖ್ಯೆಗನುಗುಣವಾಗಿ ಅಸ್ಪೃಶ್ಯರಿಗೆ ಪಾಲು ದೊರಕಬೇಕೆಂದು ಮಾಜಿ ಸಚಿವ ಶ್ರೀ ಎನ್. ರಾಚಯ್ಯ ಮತ್ತು ಮಾಜಿ ಉಪ ಸಚಿವ ಶ್ರೀ ಬಿ. ಬಸವಲಿಂಗಪ್ಪನವರು ಇಂದು ಇಲ್ಲಿ ಒತ್ತಾಯಪಡಿಸಿದರು.</p>.<p>ಜನಸಂಖ್ಯೆಗನುಗುಣವಾಗಿಮೀಸಲಿಡುವುದನ್ನು ರಾಜ್ಯಾಂಗ ತಿದ್ದುಪಡಿ ಮಾಡಿಯಾದರೂ ಜಾರಿಗೆ ತರದಿದ್ದರೆ ಬೀದಿಗೆ ಇಳಿಯುತ್ತೇವೆ ಎಂದು ರಾಚಯ್ಯನವರು ಎಚ್ಚರಿಕೆ ನೀಡಿದರು.</p>.<p><strong>ಎ.ಐ.ಸಿ.ಸಿ. ಅಧಿವೇಶನಕ್ಕೆಭರದ ಸಿದ್ಧತೆ</strong></p>.<p><strong>ಬೆಂಗಳೂರು, ಜುಲೈ 7–</strong> ನಗರದಲ್ಲಿ 10ರಿಂದ ನಡೆಯಲಿರುವ ಎ.ಐ.ಸಿ.ಸಿ. ಅಧಿವೇಶನದಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪ ಅವರು ಜುಲೈ 8ರಂದು ಮಧ್ಯಾಹ್ನ 2.10ಕ್ಕೆ ಹಾಗೂ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಜುಲೈ 9ರಂದು ಸಂಜೆ 5.30ಕ್ಕೆ ನಗರಕ್ಕೆ ಆಗಮಿಸುವರು. ವಿಮಾನ ನಿಲ್ದಾಣದಿಂದ, ಕಾಂಗ್ರೆಸ್ ಅಧ್ಯಕ್ಷರು ತಂಗುವ ‘ಕುಮಾರ ಕೃಪಾ’ದವರೆಗೆ ಕಾಂಗ್ರೆಸ್ ಅಧ್ಯಕ್ಷರಿಗೆ ಸ್ವಾಗತ ನೀಡಲು ಕಮಾನುಗಳು ನಿರ್ಮಾಣವಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದಿನಲ್ಲಿ ಐದು ಕಡೆ ಗೋಲಿಬಾರ್: ಇಬ್ಬರ ಸಾವು</strong></p>.<p><strong>ಹೈದರಾಬಾದ್, ಜುಲೈ 7– </strong>ತೆಲಂಗಾಣ ಚಳವಳಿಕಾರರ ಹಿಂಸಾತ್ಮಕ ಕೃತ್ಯಗಳ ಕಾರಣ ಪೊಲೀಸರು ಇಂದು ಹೈದರಾಬಾದ್ ನಗರ ಮತ್ತು ಅದರ ಹೊರವಲಯಗಳಲ್ಲಿ ಐದು ಕಡೆ ಗೋಲಿಬಾರ್ ಮಾಡಿದ ಪರಿಣಾಮ ಇಬ್ಬರು ಸತ್ತು ಹಲವರು ಗಾಯಗೊಂಡರು.</p>.<p><strong>ಅಸ್ಪೃಶ್ಯರಿಗೆ ಸಂಖ್ಯೆ ಆಧಾರಪ್ರಾತಿನಿಧ್ಯಕ್ಕೆ ಸಮ್ಮೇಳನದಲ್ಲಿ ಒತ್ತಾಯ</strong></p>.<p><strong>ಬೆಂಗಳೂರು, ಜುಲೈ 7– </strong>ರಾಜಕೀಯ ಅಧಿಕಾರ ಮತ್ತು ಆಡಳಿತ ವ್ಯವಹಾರಗಳಲ್ಲಿ ಜನಸಂಖ್ಯೆಗನುಗುಣವಾಗಿ ಅಸ್ಪೃಶ್ಯರಿಗೆ ಪಾಲು ದೊರಕಬೇಕೆಂದು ಮಾಜಿ ಸಚಿವ ಶ್ರೀ ಎನ್. ರಾಚಯ್ಯ ಮತ್ತು ಮಾಜಿ ಉಪ ಸಚಿವ ಶ್ರೀ ಬಿ. ಬಸವಲಿಂಗಪ್ಪನವರು ಇಂದು ಇಲ್ಲಿ ಒತ್ತಾಯಪಡಿಸಿದರು.</p>.<p>ಜನಸಂಖ್ಯೆಗನುಗುಣವಾಗಿಮೀಸಲಿಡುವುದನ್ನು ರಾಜ್ಯಾಂಗ ತಿದ್ದುಪಡಿ ಮಾಡಿಯಾದರೂ ಜಾರಿಗೆ ತರದಿದ್ದರೆ ಬೀದಿಗೆ ಇಳಿಯುತ್ತೇವೆ ಎಂದು ರಾಚಯ್ಯನವರು ಎಚ್ಚರಿಕೆ ನೀಡಿದರು.</p>.<p><strong>ಎ.ಐ.ಸಿ.ಸಿ. ಅಧಿವೇಶನಕ್ಕೆಭರದ ಸಿದ್ಧತೆ</strong></p>.<p><strong>ಬೆಂಗಳೂರು, ಜುಲೈ 7–</strong> ನಗರದಲ್ಲಿ 10ರಿಂದ ನಡೆಯಲಿರುವ ಎ.ಐ.ಸಿ.ಸಿ. ಅಧಿವೇಶನದಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪ ಅವರು ಜುಲೈ 8ರಂದು ಮಧ್ಯಾಹ್ನ 2.10ಕ್ಕೆ ಹಾಗೂ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಜುಲೈ 9ರಂದು ಸಂಜೆ 5.30ಕ್ಕೆ ನಗರಕ್ಕೆ ಆಗಮಿಸುವರು. ವಿಮಾನ ನಿಲ್ದಾಣದಿಂದ, ಕಾಂಗ್ರೆಸ್ ಅಧ್ಯಕ್ಷರು ತಂಗುವ ‘ಕುಮಾರ ಕೃಪಾ’ದವರೆಗೆ ಕಾಂಗ್ರೆಸ್ ಅಧ್ಯಕ್ಷರಿಗೆ ಸ್ವಾಗತ ನೀಡಲು ಕಮಾನುಗಳು ನಿರ್ಮಾಣವಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>