<p><strong>ವೀರಪ್ಪನ್ ಗಡುವು ಅಂತ್ಯ, ಮಾತುಕತೆಗೆ ಆಸಕ್ತಿ</strong></p>.<p><strong>ಈರೋಡ್, ನ. 9 (ಯುಎನ್ಐ, ಪಿಟಿಐ)–</strong> ಈ ತಿಂಗಳ ಒಂದರಂದು ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಯನ್ನು ಕುಖ್ಯಾತ ದಂತಚೋರ ವೀರಪ್ಪನ್ ಅಪಹರಿಸಿದ ಬಳಿಕ ಇದೇ ಮೊದಲ ಬಾರಿ ನಾಳೆ ರಾತ್ರಿ ಜಿಲ್ಲಾಧಿಕಾರಿ ಎನ್.ಪಳನಿಯಪ್ಪನ್, ವೀರಪ್ಪನ್ನ ಪ್ರತಿನಿಧಿಯ ಜತೆ ಅಂತಿಯೂರ್ ಅರಣ್ಯ ಅತಿಥಿಗೃಹದಲ್ಲಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.</p>.<p>ಕಳೆದ ರಾತ್ರಿ ಜಿಲ್ಲಾಧಿಕಾರಿ ಅವರಿಗೆ ವೀರಪ್ಪನ್ ಕಳುಹಿಸಿದ ಸಂದೇಶದಲ್ಲಿ ತನ್ನ ಪ್ರತಿನಿಧಿಯನ್ನು ವರಡು ಪಲ್ಲಮ್ಗೆ ನಾಳೆ ಸಂಜೆ 5 ಗಂಟೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ. ತನ್ನ ಪ್ರತಿನಿಧಿಗೆ ತೊಂದರೆ ಉಂಟು ಮಾಡಿದಲ್ಲಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಕೊಲ್ಲುವುದಾಗಿ ಎಚ್ಚರಿಸಿದ್ದಾನೆ.</p>.<p><strong>ರಾಜ್ಯದ ಆಸ್ಪತ್ರೆ ಸುಧಾರಣೆ ಕಾರ್ಯ ಮಾರ್ಚ್ನಿಂದ</strong></p>.<p><strong>ಬೆಂಗಳೂರು, ನ. 9–</strong> ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ರೂಪಿಸಿರುವ 546 ಕೋಟಿ ರೂಪಾಯಿ ವೆಚ್ಚದ ವಿಶ್ವ ಬ್ಯಾಂಕ್ ನೆರವಿನ ಯೋಜನೆ ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್ನಿಂದ ಕಾರ್ಯಾರಂಭವಾಗಲಿದೆ ಎಂದು ವಾರ್ತಾ ಸಚಿವ ಎಂ.ಸಿ. ನಾಣಯ್ಯ ಅವರು ಇಂದು ಇಲ್ಲಿ ತಿಳಿಸಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಈ ಯೋಜನೆ ರೂಪಿಸಲಾಗಿದೆ. ಇಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅರ್ಹರಿಗೆ ಹಸಿರು ಕಾರ್ಡ್ ನೀಡಲಾಗುವುದು. ಚಿಕಿತ್ಸೆ ಪಡೆಯುವ ಇತರರಿಗೆ ಕನಿಷ್ಠ ದರ ವಿಧಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೀರಪ್ಪನ್ ಗಡುವು ಅಂತ್ಯ, ಮಾತುಕತೆಗೆ ಆಸಕ್ತಿ</strong></p>.<p><strong>ಈರೋಡ್, ನ. 9 (ಯುಎನ್ಐ, ಪಿಟಿಐ)–</strong> ಈ ತಿಂಗಳ ಒಂದರಂದು ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಯನ್ನು ಕುಖ್ಯಾತ ದಂತಚೋರ ವೀರಪ್ಪನ್ ಅಪಹರಿಸಿದ ಬಳಿಕ ಇದೇ ಮೊದಲ ಬಾರಿ ನಾಳೆ ರಾತ್ರಿ ಜಿಲ್ಲಾಧಿಕಾರಿ ಎನ್.ಪಳನಿಯಪ್ಪನ್, ವೀರಪ್ಪನ್ನ ಪ್ರತಿನಿಧಿಯ ಜತೆ ಅಂತಿಯೂರ್ ಅರಣ್ಯ ಅತಿಥಿಗೃಹದಲ್ಲಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.</p>.<p>ಕಳೆದ ರಾತ್ರಿ ಜಿಲ್ಲಾಧಿಕಾರಿ ಅವರಿಗೆ ವೀರಪ್ಪನ್ ಕಳುಹಿಸಿದ ಸಂದೇಶದಲ್ಲಿ ತನ್ನ ಪ್ರತಿನಿಧಿಯನ್ನು ವರಡು ಪಲ್ಲಮ್ಗೆ ನಾಳೆ ಸಂಜೆ 5 ಗಂಟೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ. ತನ್ನ ಪ್ರತಿನಿಧಿಗೆ ತೊಂದರೆ ಉಂಟು ಮಾಡಿದಲ್ಲಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಕೊಲ್ಲುವುದಾಗಿ ಎಚ್ಚರಿಸಿದ್ದಾನೆ.</p>.<p><strong>ರಾಜ್ಯದ ಆಸ್ಪತ್ರೆ ಸುಧಾರಣೆ ಕಾರ್ಯ ಮಾರ್ಚ್ನಿಂದ</strong></p>.<p><strong>ಬೆಂಗಳೂರು, ನ. 9–</strong> ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ರೂಪಿಸಿರುವ 546 ಕೋಟಿ ರೂಪಾಯಿ ವೆಚ್ಚದ ವಿಶ್ವ ಬ್ಯಾಂಕ್ ನೆರವಿನ ಯೋಜನೆ ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್ನಿಂದ ಕಾರ್ಯಾರಂಭವಾಗಲಿದೆ ಎಂದು ವಾರ್ತಾ ಸಚಿವ ಎಂ.ಸಿ. ನಾಣಯ್ಯ ಅವರು ಇಂದು ಇಲ್ಲಿ ತಿಳಿಸಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಈ ಯೋಜನೆ ರೂಪಿಸಲಾಗಿದೆ. ಇಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅರ್ಹರಿಗೆ ಹಸಿರು ಕಾರ್ಡ್ ನೀಡಲಾಗುವುದು. ಚಿಕಿತ್ಸೆ ಪಡೆಯುವ ಇತರರಿಗೆ ಕನಿಷ್ಠ ದರ ವಿಧಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>